ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶಾತಿ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಆದರೆ ಆನ್ ಲೈನ್ ಲಿಂಕ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಸರ್ವೀಸ್ ಲಭ್ಯವಿಲ್ಲ ಎಂದು ತೋರಿಸುತ್ತಿರುವ ಕಾರಣ ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಸಂಬಂಧಿಸಿದ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಮೇ 03 ರೊಳಗೆ ಸಲ್ಲಿಸಬೇಕು.
ಮೇ 09 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9480843023 ಗೆ ಸಂಪರ್ಕಿಸಬಹುದು.




