ಬಹು ವರ್ಷಗಳ ಕನಸಿನ ಹಸಿರುಮಕ್ಕಿಯ ಬ್ರಿಡ್ಜ್ ನನಸು
ಶಿವಮೊಗ್ಗ: ಮಲೆನಾಡಿನಿಂದ ಕರಾವಳಿ ಭಾಗಕ್ಕೆ ಸಂಪರ್ಕಿಸುವ ಸಾಗರ ತಾಲ್ಲೂಕಿನ ಹಸಿರುಮಕ್ಕಿಯ ಶರಾವತಿ ಮುಳುಗಡೆ ಹಿನ್ನೀರ ಕಡವಿನಲ್ಲಿ ನಿರ್ಮಾಣ ಹಂತದಲ್ಲಿರುವ “ಹಸಿರುಮಕ್ಕಿ ಸೇತುವೆ” ಕಾಮಗಾರಿ ಪ್ರದೇಶಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರೊಂದಿಗೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದರು. ಇದೇ ವೇಳೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಹಸಿರು ಮಕ್ಕಿ ಸೇತುವೆ ಸುಮಾರು 1155 ಮೀ. ಉದ್ದ ಹಾಗೂ 8.5 ಮೀ. ಅಗಲದಾಗಿದ್ದು, ಸನ್ಮಾನ್ಯ ಮಾಜಿ ಸಭಾಪತಿಗಳಾದ ಕಾಗೋಡು ತಿಮ್ಮಪ್ಪನವರ ಕನಸು ಹಾಗೂ ಪರಿಶ್ರಮದ ಫಲದಿಂದಾಗಿ ಸೇತುವೆ ಕಾಮಗಾರಿಯನ್ನು ಮಂಜೂರು ಮಾಡಿಸಿದ್ದರು.
ಹಸಿರುಮಕ್ಕಿ ಸೇತುವೆ ಸಂಚಾರಕ್ಕೆ ಮುಕ್ತವಾದರೆ ಸಾಗರ ತಾಲೂಕಿನಿಂದ ಉಡುಪಿ, ಮಂಗಳೂರು, ಕುಂದಾಪುರ, ಭಟ್ಕಳ ಹಾಗೂ ಕೊಲ್ಲೂರು ಕ್ಷೇತ್ರಗಳಿಗೆ ಕಡಿಮೆ ಅವಧಿಯಲ್ಲಿಯೇ ತಲುಪಲು ಸಹಕಾರಿಯಾಗಲಿದೆ.
ಈ ವೇಳೆ ಜನಪ್ರತಿನಿಧಿಗಳು, ಪಕ್ಷದ ಮುಖಂಡರುಗಳು, ಮಹಿಳಾ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.




