ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಹಗ್ಗ ಜಗ್ಗಾಟ ನಡೆಯುತ್ತಿರುವ ಬೆನ್ನೆಲ್ಲೇ ರಾಷ್ಟ್ರೀಯ ಮಟ್ಟದಲ್ಲಿ ಹಿಂದುಳಿದ ವರ್ಗಗಳನ್ನು ಪಕ್ಷದತ್ತ ಸೆಳೆಯುವ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚೆ ಆರಂಭವಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇದಕ್ಕಾಗಿ ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಕಾರ್ಯ ಕಾರ್ಯ ಶೈಲಿಯನ್ನು ನಿರ್ಧರಿಸುವ ದೃಷ್ಟಿಯಿಂದ ರಚಿಸಲಾಗಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಇರುವ ಸಮನ್ವಯ ಸಮಿತಿ ಸಭೆ ನಾಳೆಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿದೆ.
ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ರಚಿಸಲಾಗಿರುವ ಈ ಸಮಿತಿಯ ಸಭೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ.
ಈ ಸಮಿತಿಯಲ್ಲಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವರು ಇದ್ದಾರೆ.
ಸದ್ಯದಲ್ಲೇ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನವೇ ಹಿಂದುಳಿದ ವರ್ಗಗಳನ್ನು ಆಕರ್ಷಿಸುವ ದೃಷ್ಟಿಯಿಂದ ಕಾಂಗ್ರೆಸ್ ಈ ಸಮಾವೇಶದ ಮೂಲಕ ಹಲವು ನಿರ್ಧಾರಗಳನ್ನು ಕೈಗೊಂಡು ಅದನ್ನು ಘೋಷಿಸುವ ಸಾಧ್ಯತೆ ಇದೆ.




