ಮೈಸೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವಾರು ಅಸ್ವಭಾವಿಕ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂಬ ಒತ್ತಡವನ್ನು ಸಿಎಂ ಸಿದ್ದರಾಮಯ್ಯ ನಯವಾಗಿ ತಿರಸ್ಕರಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ ಎಂದರು.
ಆರೋಪಗಳ ಕುರಿತ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ನೀಡಿರುವ ಹೇಳಿಕೆಗೆ ನಾವು ಪರವೂ ಇಲ್ಲ, ವಿರೋಧವೂ ಇಲ್ಲ. ಪೊಲೀಸ್ ಇಲಾಖೆಯವರು ಸಲ್ಲಿಸುವ ವರದಿಯ ಆಧಾರದ ಮೇಲೆ, ಎಸ್ಐಟಿ ಮಾಡಬೇಕೆಂಬ ಶಿಫಾರಸು ಬಂದರೆ ರಚಿಸುತ್ತೇವೆ. ಶನಿವಾರದೊಳಗೆ ಎಲ್ಲವೂ ಗೊತ್ತಾಗಲಿದೆ ಎಂದರು.
ದೂರುದಾರ 10 ವರ್ಷ ತಲೆಮರೆಸಿಕೊಂಡಿದ್ದ. ಆತ, ಪೊಲೀಸರ ಎದುರು ಹೇಳಿಕೆ ಕೊಟ್ಟಿದ್ದಾನೆ. ನಾನೇ ಹೂತು ಹಾಕಿದ್ದೇನೆ ಎಂದೆಲ್ಲಾ ಹೇಳಿದ್ದಾನೆ. ಆ ಜಾಗಕ್ಕೆ ಕರೆದುಕೊಂಡು ಹೋದರೆ ಹೆಣಗಳನ್ನು ತೋರಿಸುತ್ತೇನೆ ಎಂದೂ ಹೇಳಿದ್ದಾನೆ. ಪೊಲೀಸರು ಏನು ಹೇಳುತ್ತಾರೆಯೋ ನೋಡೋಣ ಎಂದರು.
ಈ ಪ್ರಕರಣದಲ್ಲಿ ತನಿಖೆ ಸರಿಯಾಗಿ ಆಗುತ್ತಿಲ್ಲ ಎಂಬ ಗೋಪಾಲಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಾನೂನು ರೀತಿ ಮಾಡಬೇಕಲ್ಲವೇ? ಕಾನೂನು ಬಿಟ್ಟು ಮಾಡಕ್ಕಾಗುತ್ತಾ? ಎತ್ತು ಈಯ್ತು ಅಂದ್ರೆ ಕೊಟ್ಟಿಗೆಗ್ ಕಟ್ಟು ಅನ್ನೋದಾ? ಎತ್ತು ಕರು ಹಾಕುವುದಿಲ್ಲ. ಕೊಟ್ಟಿಗೆಗೆ ಕಟ್ಟಿ ಅಂದ್ರೆ ಕಟ್ಟಿಬಿಡೋದಾ? ಎಲ್ಲವನ್ನೂ ಕಾನೂನು ರೀತಿ ಮಾಡುತ್ತೇವೆ ಎಂದರು.




