ಸಿಎಂ @siddaramaiah ನವರೇ,
ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಜಯಪ್ರಕಾಶ್ ನಾರಾಯಣ್ ಆದಿಯಾಗಿ ಪಕ್ಷ, ಸೈದ್ಧಾಂತಿಕ ಹಿನ್ನೆಲೆ ಮೀರಿ ಅನೇಕ ಮಹನೀಯರು RSSನ ಸೇವೆ, ಸಮರ್ಪಣೆ, ಸಮಾನತೆ, ಭಾತೃತ್ವದ ಭಾವನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಇತಿಹಾಸದಲ್ಲಿ ದಾಖಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
1934ರಲ್ಲಿ ಅರ್ ಎಸ್ಎಸ್ ಶಿಬಿರಕ್ಕೆ ಭೇಟಿ ನೀಡಿದ್ದ ಗಾಂಧೀಜಿ ಅವರು ಅಲ್ಲಿ ಎಲ್ಲಾ ಸ್ವಯಂಸೇವಕರು ಜಾತಿ, ಮತ, ಕುಲದ ಭೇದವಿಲ್ಲದೆ ರಾಷ್ಟ್ರ ಸೇವೆಯ ಏಕೈಕ ಗುರಿಯೊಂದಿಗೆ ಒಟ್ಟಿಗೆ ಅನ್ಯೋನ್ಯವಾಗಿ ಒಂದೇ ತಾಯಿ ಮಕ್ಕಳಂತೆ ಇದ್ದದ್ದನ್ನು ಕಂಡು “ಜಾತಿಬೇಧ ರಹಿತ, ಅಸ್ಪೃಶ್ಯತೆ ರಹಿತ ಸಮಾಜ ನಿರ್ಮಾಣದ ನನ್ನ ಕನಸನ್ನು ಆರ್ ಎಸ್ಎಸ್ ನನಸು ಮಾಡಿದೆ” ಎಂದು ಪ್ರಸಂಶೆ ವ್ಯಕ್ತಪಡಿಸಿದ್ದರು.
1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಆರ್ ಎಸ್ಎಸ್ ಸ್ವಯಂಸೇವಕರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು 1963ರ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್ ಗೆ ಸ್ವಯಂಸೇವಕರನ್ನು ಆಹ್ವಾನಿಸಿದ್ದರು.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿರವರು 2018ರಲ್ಲಿ RSSನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಿಮ್ಮ ಹೇಳಿಕೆಯಿಂದ ನನಗೇನು ಅಚ್ಚರಿಯಾಗಿಲ್ಲ. ಕಾಂಗ್ರೆಸ್ ಪಕ್ಷದ ಹತಾಶೆ, ಅಸೂಯೆ ಏನು ಎಂಬುದು ನನಗೆ ಅರ್ಥವಾಗುತ್ತದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಇತಿಹಾಸ, ಸಿದ್ಧಾಂತ, ಕಾರ್ಯದ ಬಗ್ಗೆ ಅಪಪ್ರಚಾರ, ನಿಂದನೆ, ತೇಜೋವಧೆ ಮಾಡುವ ವಿಫಲ ಪ್ರಯತ್ನವನ್ನ ಕಾಂಗ್ರೆಸ್ ಪಕ್ಷ ಅನೇಕ ದಶಕಗಳಿಂದಲೂ ಮಾಡುತ್ತಲೇ ಬಂದಿದೆ. ಆದರೂ ಆರ್ ಎಸ್ಎಸ್ ಬಗ್ಗೆ ಜನರಿಗೆ ಗೌರವ, ಅಭಿಮಾನ ಹೆಚ್ಚುತ್ತಲೇ ಇದೆ. ಸಂಘದ ವೈಚಾರಿಕತೆ ವ್ಯಾಪಕವಾಗಿ ಸ್ವೀಕೃತವಾಗುತ್ತಿದೆ, ಸಂಘ ಪರಿವಾರ ದೊಡ್ಡದಾಗುತ್ತಲೇ ಇದೆ.
ಆರ್ ಎಸ್ಎಸ್ ನ ನಿಂದನೆ ಮಾಡಿದರೆ ಕಾಂಗ್ರೆಸ್ ಹೈಕಮಾಂಡ್ ಮತ್ತು ನಕಲಿ ಗಾಂಧಿ ಕುಟುಂಬವನ್ನ ಮೆಚ್ಚಿಸಬಹುದು. ತಮ್ಮ ಅಕ್ಕಪಕ್ಕದಲ್ಲೇ ಓಡಾಡಿಕೊಂಡು ಅವರ ರಹಸ್ಯ ಕಾರ್ಯಸೂಚಿಗಳನ್ನು ಜಾರಿ ಮಾಡಲು ಸದಾ ಹೊಂಚು ಹಾಕುತ್ತಿರುವ ಕೆಲವು ಎಡಪಂಥೀಯರನ್ನು, so-called ಬುದ್ಧಿಜೀವಿಗಳನ್ನು ಓಲೈಕೆ ಮಾಡಬಹುದು. ಆದರೆ ರಾಜಕೀಯ ಲಾಭಕ್ಕಾಗಿ ದೇಶಭಕ್ತ ಸಂಘಟನೆಗಳನ್ನು ನಿಂದಿಸುವ ಕಾಂಗ್ರೆಸ್ ಪಕ್ಷದ ಈ ನಡೆಯನ್ನ ಯಾವ ದೇಶಪ್ರೇಮಿಯೂ ಕ್ಷಮಿಸುವುದಿಲ್ಲ. ಕೆಲವೇ ಕೆಲವರನ್ನು ಮೆಚ್ಚಿಸಲು ಕೋಟ್ಯಂತರ ದೇಶಪ್ರೇಮಿಗಳ ಕಣ್ಣಲ್ಲಿ ಚಿಕ್ಕವರಾಗಬೇಡಿ.
ಸ್ವಾತಂತ್ರ್ಯ ಹೋರಾಟದಲ್ಲಿ ಆರ್ ಎಸ್ಎಸ್ ಪಾತ್ರ ಏನು ಎಂಬುದನ್ನ ಸ್ವಲ್ಪ ಓದಿ ತಿಳಿದುಕೊಳ್ಳಿ.
– ಆರ್.ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




