ಬೆಂಗಳೂರು: ಚಿತ್ರದುರ್ಗದ ವಸತಿ ನಿಲಯದ ಪದವಿ ವಿದ್ಯಾರ್ಥಿನಿಯ ಬರ್ಬರ ಕೊಲೆ ಪ್ರಕರಣದ ಆರೋಪಿಗಳನ್ನು ಮುಲಾಜಿಲ್ಲದೇ ಬಂಧಿಸಿ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಬಿಜೆಪಿ ಸದಸ್ಯ ನವೀನಕುಮಾರ ಸೇರಿ ಇನ್ನಿತರರು ಚಿತ್ರದುರ್ಗದಲ್ಲಿ ನಡೆದ ಪದವಿ ವಿದ್ಯಾರ್ಥಿನಿಯ ಬರ್ಬರ ಕೊಲೆ ಕೃತ್ಯವನ್ನು ಪ್ರಸ್ತಾಪಿಸಿದರು.
ಈ ರೀತಿಯ ಘಟನೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಹಾಸ್ಟೆಲ್ಗೂ ಕಳುಹಿಸಲು ಭಯಪಡುವಂತಾಗಿದೆ, ಸರ್ಕಾರ ಈ ರೀತಿಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ, ಈ ಘಟನೆ ಸಂಬಂಧ ಆರೋಪಿಗಳ ಮೇಲೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದರು.




