ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಶೈಲಿ, ಜೀವನ ಪದ್ಧತಿ ಸೇರಿದಂತೆ ಅನೇಕ ಕಾರಣಗಳಿಂದಾಗಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕ್ಯಾನ್ಸರ್ ನಿಂದಾಗಿ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಿಮೋಥೆರಪಿಗೆ ಬಳಸುವ ಅನೇಕ ಔಷಧಗಳನ್ನು ಕಸ್ಟಮ್ಸ್ ಸುಂಕ ರಿಯಾಯಿತಿ ನೀಡಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖರಾಗಲು ಮುಂದುವರಿದ ಚಿಕಿತ್ಸಾ ಭಾಗವಾಗಿ ಕಿಮೋಥೆರಪಿಯ ಜೊತೆಗೆ ಇಮ್ಯೂನೋಥೆರಪಿಯ ಅವಶ್ಯಕತೆ ಇದ್ದು, ಪ್ರಸ್ತುತ ಇಮ್ಯೂನೋಥೆರಪಿ ಚಿಕಿತ್ಸೆಗೆ ಪ್ರತಿ ರೋಗಿಗೆ ಸುಮಾರು 20-50 ಲಕ್ಷ ದಷ್ಟು ಖರ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳನ್ನು ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿಯಿಂದ ಕ್ಯಾನ್ಸರ್ ಚಿಕಿತ್ಸಾ ವೆಚ್ಚ ಕಡಿಮೆಯಾಗಲಿದ್ದು, ಇದರಿಂದಾಗಿ ಲಕ್ಷಾಂತರ ಬಡವರಿಗೆ ಅನುಕೂಲವಾಗಲಿದೆ ಮತ್ತು ಕೈಗೆಟಕುವ ದರದಲ್ಲಿ ಬಡವರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ.
ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
– ಡಾ.ಸಿ.ಎನ್.ಮಂಜುನಾಥ್, ಸಂಸದ




