ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದಿಂದ ವಜಾಗೊಳಿಸಿದ ಕೆ ಎನ್ ರಾಜಣ್ಣ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ಆರಂಭಿಸಿದ್ದಾರೆ.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಕೆ ಎನ್ ರಾಜಣ್ಣ ಅವರನ್ನು ಮಂತ್ರಿಮಂಡಲಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಭಾವಿಯಾಗಿರುವ ವಾಲ್ಮೀಕಿ ಸಮುದಾಯದ ಶಾಸಕರು ಮತ್ತು ರಾಜಣ್ಣ ಅವರ ಆಪ್ತರ ಬಿಗಿಪಟ್ಟಿಗೆ ಮಣಿದಿರುವ ಸಿದ್ದರಾಮಯ್ಯ, ಇದೀಗ ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಜಣ್ಣ ಅವರ ಹಿತ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಸಿಎಂ ಆಪ್ತ ವಲಯಗಳು ಹೇಳಿವೆ.
ಮತಗಳ್ಳತನ ಕುರಿತಂತೆ ಹೇಳಿಕೆ ನೀಡಿದ ಆರೋಪದಲ್ಲಿ ರಾಜಣ್ಣ ಅವರಿಂದ ಯಾವುದೇ ಹೇಳಿಕೆ ಪಡೆಯದೆ ಏಕಾಏಕಿ ಅವರನ್ನು ಹೈಕಮಾಂಡ್ ಆದೇಶದ ಹೆಸರಿನಲ್ಲಿ ಸಂಪುಟದಿಂದ ವಜಾ ಮಾಡಿದ ಕ್ರಮ ಸರಿಯಲ್ಲ ಎಂದು ಅವರ ಆಪ್ತರು ಮತ್ತು ವಿವಿಧ ಮಠಾಧೀಶರು ಮಾಡಿದ ಮನವಿ ಹಿನ್ನೆಲೆಯಲ್ಲಿ ರಾಜಣ್ಣ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಅತ್ಯಂತ ಸಂಕಷ್ಟ ಕಾಲದಲ್ಲೂ ಸಿದ್ದರಾಮಯ್ಯ ಅವರೊಂದಿಗೆ ಬೆಂಗಾವಲಾಗಿ ನಿಂತಿದ್ದ ರಾಜಣ್ಣ ಅವರನ್ನು ಏಕಾಏಕಿ ಸಂಪುಟದಿಂದ ವಜಾ ಗೊಳಿಸಿರುವುದು ಸರಿಯಲ್ಲ. ಕನಿಷ್ಠ ಅವರಿಂದ ಒಂದು ಸ್ಪಷ್ಟನೆಯನ್ನು ಕೇಳದೆ ತೀರ್ಮಾನ ಕೈಗೊಂಡಿರುವುದರಿಂದ ಸಿದ್ದರಾಮಯ್ಯ ಅವರು ತಮ್ಮ ಅಪ್ತರನ್ನೇ ರಕ್ಷಿಸಲು ಸಾಧ್ಯವಾಗಿಲ್ಲ ಎಂಬ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರನ್ನು ಆದಷ್ಟು ಶೀಘ್ರ ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವುದು ಸೂಕ್ತ ಎಂದು ಈ ಸಭೆಯಲ್ಲಿ ಬಹುತೇಕರು ಅಭಿಪ್ರಾಯ ಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಖುದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಲು ತೀರ್ಮಾನಿಸಿದ್ದಾರೆ. ಮುಂದಿನ ವಾರದಲ್ಲಿ ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.



