ದೆಹಲಿ: ಕರ್ನಾಟಕದ ಆಳಂದದಲ್ಲಿ 6,000 ಮತದಾರರ ಹೆಸರು ಡಿಲೀಟ್ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಚುನಾವಣಾ ಆಯೋಗದ ಮೇಲೆ ‘ಮತಗಳವು’ ಆರೋಪವನ್ನು ಮುಂದುವರೆಸಿದರು.
ಕರ್ನಾಟಕದ ಆಳಂದ ವಿಧಾನಸಭಾಕ್ಷೇತ್ರವನ್ನು ಪ್ರಮುಖ ಉದಾಹರಣೆಗಳೊಂದಿಗೆ ಹಲವು ಸಾಕ್ಷಿಗಳನ್ನು ಬಿಡುಗಡೆ ಮಾಡಿದರು. ಆಳಂದ ಕರ್ನಾಟಕದ ಒಂದು ಕ್ಷೇತ್ರ. ಯಾರೋ 6,018 ಮತಗಳನ್ನು ಅಳಿಸಲು ಪ್ರಯತ್ನಿಸಿದರು ಎಂದರು.
2023ರ ಚುನಾವಣೆಯಲ್ಲಿ ಆಳಂದದಲ್ಲಿ ಅಳಿಸಲಾದ ಒಟ್ಟು ಮತಗಳ ಸಂಖ್ಯೆ ನಮಗೆ ತಿಳಿದಿಲ್ಲ. ಅವು 6,018ಕ್ಕಿಂತ ಹೆಚ್ಚು. ಆದರೆ ಯಾರೋ 6,018 ಮತಗಳನ್ನು ಅಳಿಸುವಾಗ ಸಿಕ್ಕಿಬಿದ್ದರು ಎಂದರು.




