ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ 11 ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 168 ಮತದಾರರು ಇದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಕಾರ್ಯಗಳು ನಡೆಯಲಿವೆ ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಅಕ್ಟೋಬರ್ 14 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಸಲ್ಲಿಸಲು ಕಾಲ ನಿಗದಿಪಡಿಸಲಾಗಿದೆ. ಅಕ್ಟೋಬರ್ 18 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
ಅಕ್ಟೋಬರ್ 24 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಬಹುದು.
ಅಕ್ಟೋಬರ್ 29 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 4 ಗಂಟೆಯ ರವರೆಗೆ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆಸಲಾಗುವುದು. ಬಳಿಕ ಫಲಿತಾಂಶ ಘೋಷಿಸಿ ಚುನಾವಣೆ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು.




