ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ರಾಜ್ಯ ಸರ್ಕಾರ ಬೊಕ್ಕಸದ ಹಣವನ್ನು ಪೋಲು ಮಾಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆಪಾದಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿಕೆಯೊಂದನ್ನು ಪೋಸ್ಟ್ ಮಾಡಿರುವ ಅವರು, ಜಾತಿಗಣತಿ ಹೆಸರಿನಲ್ಲಿ ಹತ್ತು ವರ್ಷಗಳ ಹಿಂದೆಯೇ 150 ಕೋಟಿ ರೂಪಾಯಿ ಹಣವನ್ನು ಪೋಲು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಅದಕ್ಕಿಂತಲೂ ಹೆಚ್ಚಿನ ಸಾರ್ವಜನಿಕ ಹಣವನ್ನು ಅಪವ್ಯಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಾತಿಗಣತಿ ನಡೆಸಲು ಎಷ್ಟು ಸಮಯ ಬೇಕು ಎನ್ನುವ ಬಗ್ಗೆ ಪೂರ್ವಯೋಜನೆ ಇಲ್ಲ? ಜಾತಿಗಣತಿಯಲ್ಲಿ ಯಾವ ಪ್ರಶ್ನೆ ಕೇಳಬೇಕು ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಜಾತಿಗಣತಿಗೆ ಶಿಕ್ಷಕರನ್ನು ನಿಯೋಜನೆ ಮಾಡಿದರೆ ಸರ್ಕಾರಿ ಶಾಲೆಗಳಲ್ಲಿ ಯಾರು? ಪಾಠ ಮಾಡುತ್ತಾರೆ ಎನ್ನುವ ಬಗ್ಗೆ ಯೋಚನೆ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.
ಯಾವುದೇ ಪೂರ್ವಸಿದ್ಧತೆ, ರೂಪುರೇಷೆ, ಗೊತ್ತು-ಗುರಿ ಇಲ್ಲದೆ, ಕೇವಲ ರಾಜಕೀಯ ತೆವಲಿಗೆ ಮಾಡುತ್ತಿರುವ ಈ ಜಾತಿಗಣತಿಯಿಂದ ಕನ್ನಡಿಗರಿಗೆ ನಯಾ ಪೈಸೆ ಉಪಯೋಗವಿಲ್ಲ. ಕಾಂಗ್ರೆಸ್ ಸರ್ಕಾರ, ಈಗ ಮತ್ತೊಮ್ಮೆ 650 ಕೋಟಿ ರೂಪಾಯಿ ಕನ್ನಡಿಗರ ತೆರಿಗೆ ಹಣವನ್ನು ಬೇಕಾಬಿಟ್ಟಿ ಪೋಲು ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.




