ಬೆಳಗಾವಿಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ರಮೇಶ ಕತ್ತಿ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೇಲ್ನೋಟಕ್ಕೆ ಅದು ನಿಜವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇಂತಹ ಅಸಂವೇದನಾಶೀಲ ಮಾತುಗಳು ಸಮಾಜದ ಸೌಹಾರ್ದತೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ಗಂಭೀರ ಧಕ್ಕೆ ತರುತ್ತವೆ. ಆದ್ದರಿಂದ, ಕಾನೂನಿನ ಪ್ರಕಾರ ತನಿಖೆಯನ್ನು ಕೈಗೊಂಡು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಕೂಡ ಆಗ್ರಹಿಸುತ್ತೇನೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಜಾತಿಯಂತಹ ವಿಷವನ್ನು ಬೇರುಸಹಿತ ನಿರ್ಮೂಲನೆಗೊಳಿಸಲು ತಮ್ಮ ಜೀವನವನ್ನೇ ಅರ್ಪಿಸಿದ ಮಹಾನ್ ತತ್ವಜ್ಞಾನಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ “ಸಮಾನತೆ, ಮಾನವೀಯತೆ ಮತ್ತು ಸಹೋದರತೆ” ಎಂಬ ಸಿದ್ಧಾಂತಗಳೇ ನಮ್ಮ ಮಾರ್ಗ ಮತ್ತು ದಾರಿದೀಪವಾಗಬೇಕು — “ನಾ ಹೆಚ್ಚು, ನೀ ಹೆಚ್ಚು” ಎಂಬ ಜಾತಿಯ ವಿಷವಲ್ಲ.
– ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ




