ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ: ವಿಜಯೇಂದ್ರ

5 months ago

ದೇಶದ ಬೆನ್ನೆಲುಬು ರೈತ, ‘ಅನ್ನದಾತ ಮುನಿದರೆ ಸರ್ಕಾರ ನಿದ್ರೆಗೆ ಜಾರಲು ಸಾಧ್ಯವೇ ಇಲ್ಲ’ ಎಂಬ ಇತಿಹಾಸ ಮರುಕಳಿಸಿದೆ.

ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ನಡೆದ ಕಬ್ಬು ಬೆಳೆಗಾರ ರೈತರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3300 ರೂ ದರ ನಿಗದಿ ಪಡಿಸಿ ನಿರ್ಧಾರ ಕೈಗೊಂಡಿದೆ. ಹೋರಾಟ ನಿರತ ರೈತ ಬಂಧುಗಳು ನಿರ್ಧಾರವನ್ನು ಸ್ವಾಗತಿಸಿ ಮುಷ್ಕರವನ್ನು ಕೈ ಬಿಟ್ಟಿರುವುದು ಸಮಂಜಸವಾಗಿದೆ.

ಈ ಹೋರಾಟದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ, ರೈತನಾಯಕ ಮಾನ್ಯ BS Yediyurappa  ಅವರ ಪುತ್ರನಾಗಿ ಭಾಗವಹಿಸಿ ರೈತ ಹೋರಾಟಕ್ಕೆ ದನಿಗೂಡಿಸಿದ ಸಂದರ್ಭ ನನ್ನಲ್ಲಿ ಸಾರ್ಥಕಭಾವ ಮೂಡಿಸಿದೆ.

ರಾಜ್ಯದಲ್ಲಿ ರೈತರ ಹಿತಕ್ಕಾಗಿ ನಮ್ಮ ಸ್ಪಂದನೆ ಸದಾ ಮುಂದುವರೆಯಲಿದೆ. ರೈತರು ಹೋರಾಟಕ್ಕಿಳಿಯುವ ಸಂದರ್ಭ ಸೃಷ್ಟಿಸದೇ ರೈತರ ಬೇಡಿಕೆಗಳನ್ನು ಕಾಲಕಾಲಕ್ಕೆ ಈಡೇರಿಸುವುದು ಅಧಿಕಾರದಲ್ಲಿರುವ ಸರ್ಕಾರಗಳ ಕರ್ತವ್ಯ. Indian National Congress – Karnataka  ಸರ್ಕಾರ ಈ ನಿಟ್ಟಿನಲ್ಲಿ ಈವರೆವಿಗೂ ಅನುಸರಿಸಿದ ಉಪೇಕ್ಷೆ ಧೋರಣೆಗಳನ್ನು ಮುಂದಾದರೂ ನಿಲ್ಲಿಸಲಿ.

ಮೇಲಿಂದ ಮೇಲೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ವರದಿಯಾಗುತ್ತಿವೆ, ರೈತರ ಸೂಕ್ಷ್ಮ ಭಾವನೆಗಳಿಗೆ ಸ್ಪಂದಿಸಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ರೈತರ ನಿವೇದನೆಗಳಿಗೆ ಸ್ಪಂದಿಸುವ ‘ವಿಶೇಷ ರೈತ ನೆರವು ಘಟಕ’ವನ್ನು ಸ್ಥಾಪಿಸಲಿ ಎಂದು ಒತ್ತಾಯಿಸುವೆ.

ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್ ಸೇರಿದಂತೆ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಹೋರಾಟ ನಡೆಸಿದ ರೈತರೆಲ್ಲರನ್ನೂ ಅಭಿನಂದಿಸುವೆ. ರೈತರ ಪರಿಶ್ರಮದ ಬೆವರಿಗೆ ಸಾರ್ಥಕ ಪತಿಫಲ ನಿರಂತರವಾಗಿ ಲಭಿಸುವಂತಾಗಲಿ ಎಂದು ಹಾರೈಸುವೆ.

– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

Leave a Reply