ಲೋಕಾಯುಕ್ತ ಅಧೀಕ್ಷಕರಿಂದ ಅಹವಾಲು ಸ್ವೀಕಾರ

5 months ago

ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇದೇ ನವೆಂಬರ್ 12 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರ ವರೆಗೆ ಲೋಕಾಯುಕ್ತ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ಅವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಒದಗಿಸಬೇಕಾದ ಸರ್ಕಾರಿ ಸವಲತ್ತುಗಳು, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುವುದು. ಕಳಪೆ ಕಾಮಗಾರಿ, ಹಣ ದರುಪಯೋಗ ಕುರಿತ ಹಾಗೂ ಸರ್ಕಾರದ ಕಾರ್ಯಗಳು ಮಾಡಿಕೊಡಲು ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ಅಥವಾ ಲಂಚ ಕೇಳುತ್ತಿದ್ದಲ್ಲಿ ಈ ಸಂಬಂಧ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ತಿಳಿಸಿದ್ದಾರೆ.

Leave a Reply