ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಬೆಂಬಲ ನೀಡಿದ ಸಿಎಂ ಹಾಗೂ ಡಿಎಸ್ಎಸ್ ಮುಖಂಡರಿಗೆ ಕೃತಜ್ಞತೆಗಳು: ದುನಿಯಾ ವಿಜಯ್
ನಮ್ಮ ‘ಲ್ಯಾಂಡ್ ಲಾರ್ಡ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಇಂದು ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದಲಿತ ಸಂಘರ್ಷ ಸಮಿತಿಯ (DSS) ಹಿರಿಯ ಮುಖಂಡರಿಗೆ ನಮ್ಮ ಚಿತ್ರತಂಡದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ನಮ್ಮ ಜೊತೆಗಿದ್ದ ಅಣ್ಣ ಮಾವಳ್ಳಿ ಶಂಕರ್, ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿಕುಮಾರ್ ಈಚಲಮರ,ಹರೀಶ್ ಭೈರಪ್ಪ, ಮುರಳಿ ಕಾಟಿ ಹಾಗೂ ವಿಜಯಕುಮಾರ್ ಸೋನಾರೆ ಅವರಿಗೆ ನಾವು ಸದಾ ಚಿರಋಣಿಯಾಗಿರುತ್ತೇವೆ.
ಹಾಗು ಈ ಕಾರ್ಯ ನೆರವೇರಲು ಸಹಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳಾದ ಶ್ರೀ ಪ್ರಭಾಕರ್ ಅವರು ಹಾಗು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳಾದ ಡಾ.ನೆಲ್ಕುಂಟೆ ವೆಂಕಟೇಶಯ್ಯ ಅವರನ್ನು ತುಂಬು ಹೃದಯದಿಂದ ನೆನೆಯುತ್ತೇವೆ.
ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ತೆರಿಗೆ ವಿನಾಯಿತಿ ನೀಡುವ ಭರವಸೆ ನೀಡಿದ್ದಾರೆ. ಸರ್ಕಾರದ ಈ ನಡೆ ತಳಸಮುದಾಯಗಳ ಹಕ್ಕು ಮತ್ತು ಹೋರಾಟಗಳ ಕುರಿತು ಇನ್ನಷ್ಟು ಅರ್ಥಪೂರ್ಣ ಚಿತ್ರಗಳನ್ನು ಮಾಡಲು ನಮಗೆ ಹೊಸ ಹುರುಪು ನೀಡಿದೆ. ನಮಗೆ ಬೆಂಬಲವಾಗಿ ನಿಂತ ಮುಖ್ಯಮಂತ್ರಿಗಳಿಗೆ ಹಾಗೂ ಸಂಘಟನೆಯ ಎಲ್ಲಾ ನಾಯಕರಿಗೂ ನಮ್ಮ ಸಿನಿಮಾ ತಂಡ ಸದಾ ಕೃತಜ್ಞವಾಗಿರುತ್ತದೆ.
ಸಿನಿಮಾ ಬಿಡುಗಡೆಯಾದಾಗಿನಿಂದ ನಮ್ಮೊಂದಿಗೆ ನಿಂತು ಜನರನ್ನು ಪ್ರೇರೇಪಿಸಿದ ಎಲ್ಲಾ ಸಂಘಟನೆಗಳಿಗೆ, ನಾಯಕರಿಗೆ, ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇವೆ.
ಧನ್ಯವಾದಗಳೊಂದಿಗೆ, ‘ಲ್ಯಾಂಡ್ ಲಾರ್ಡ್’ ಚಿತ್ರತಂಡ.
ಜೈ ಭೀಮ್!
– ದುನಿಯಾ ವಿಜಯ್



