ಕನ್ನಡ ಚಿತ್ರರಂಗದಲ್ಲಿ ಸಾರ್ಥಕ 4 ದಶಕಗಳನ್ನು ಪೂರೈಸಿರುವ ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅಭಿನಂದನೆಗಳು. ಬಿಡುವಿನ ವೇಳೆ ಶಿವರಾಜ್ ಕುಮಾರ್ ಅವರ ಹಲವು ಸಿನಿಮಾಗಳನ್ನು ನಾನು ನೋಡಿ ಆನಂದಿಸಿದ್ದೇನೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ರಥಸಪ್ತಮಿ, ಜನುಮದ ಜೋಡಿ, ಜೋಡಿಹಕ್ಕಿ, ಟಗರು ಹೀಗೆ ಸಾಲು ಸಾಲು ಹಿಟ್ ಸಿನೆಮಾಗಳ ಮೂಲಕ ಕನ್ನಡ ಚಿತ್ರರಂಗದ ಕೀರ್ತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶಿವರಾಜ್ ಕುಮಾರ್ ಅವರ ಅಭಿನಯಕ್ಕೆ ಅವರೇ ಸಾಟಿ.
ಕಲಾಸೇವೆಯ ಜೊತೆ ಸಾಮಾಜಿಕ ಸೇವೆಯಲ್ಲೂ ನಿರತರಾಗಿರುವ ಕನ್ನಡಿಗರ ಪ್ರೀತಿಯ ಶಿವಣ್ಣನಿಗೆ ಭಗವಂತ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
– ಸಿದ್ದರಾಮಯ್ಯ, ಸಿಎಂ




