ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಳಕಳಿ ವ್ಯಕ್ತಪಡಿಸಿದ್ದು, ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
- ಕಾವೇರಿ ವಿಚಾರವಾಗಿ ವಿಪಕ್ಷಗಳ ನಾಯಕ ವಿಶ್ವಾಸದ ಬಳಿಕ ಮುಂದಿನ ತೀರ್ಮಾನ: ಡಿ.ಕೆ.ಶಿವಕುಮಾರ್
- ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಯ್ದೆ ಕಾನೂನುಗಳು ಚರ್ಚಿತವಾಗಬೇಕು: ಡಾ.ಎಚ್.ಸಿ.ಮಹದೇವಪ್ಪ
- ನೀಟ್ NEET ಹೋರಾಟದ ನಡುವೆ ವೈರಲ್ ಆದ ರಾಹುಲ್ ಗಾಂಧಿ, ದೀಪ್ಕೆ, ಗ್ರೆಟಾ, ಸೊರೊಸ್ ಫೋಟೋ!
- ಸಾವಯವ ರೈತರನ್ನು ಬೆಂಬಲಿಸಲು ಸಾವಯವ ಸಂತೆಯಲ್ಲಿ ಪಾಲ್ಗೊಳ್ಳಿ: ದರ್ಶನ್ ಪುಟ್ಟಣ್ಣಯ್ಯ
- ಕನಿಷ್ಠ ವೇತನ ಕೂಡಲೇ ಜಾರಿಗೊಳಿಸದಿದ್ದರೆ ತೀವ್ರ ಪ್ರತಿರೋಧ: ಜೆ ಬಾಲಕೃಷ್ಣ ಶೆಟ್ಟಿ
ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌಡರ ನಿವಾಸಕ್ಕೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ದರ್ಶನ ಪಡೆದು, ಭಾವಪೂರ್ಣ ಅಂತಿಮ ನಮನ ಸಲ್ಲಿಸಿದರು.
ಚೆನ್ನಮ್ಮನವರ ಅಗಲಿಕೆಯಿಂದ ತೀವ್ರ ದುಃಖಿತರಾಗಿರುವ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಅವರು, ಸಾಂತ್ವನ ಹೇಳಿದರು. ತಾಯಿಯನ್ನು ಕಳೆದುಕೊಂಡು ದುಃಖತಪ್ತರಾಗಿರುವ ಇಡೀ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಆಶಿಸಿದರು.








