ಬೆಂಗಳೂರು: ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಂಸದೀಯ ಮತ್ತು ಕಾನೂನು, ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದಕೊಂಡಿದ್ದಾರೆ.
- ಬೆಂಗಳೂರು ಪೇಟೆಯ ವೈಟ್ ಟಾಪಿಂಗ್ ರಸ್ತೆಯಲ್ಲಿ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ: ಕೃಷ್ಣ ಬೈರೇಗೌಡ
- ಡಿ.ಕೆ.ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆ
- ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ಕಾಂಗ್ರೆಸ್: ಎಸ್.ಸುರೇಶ್ ಕುಮಾರ್
- ಕಾವೇರಿ ವಿಚಾರವಾಗಿ ವಿಪಕ್ಷಗಳ ನಾಯಕ ವಿಶ್ವಾಸದ ಬಳಿಕ ಮುಂದಿನ ತೀರ್ಮಾನ: ಡಿ.ಕೆ.ಶಿವಕುಮಾರ್
- ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಯ್ದೆ ಕಾನೂನುಗಳು ಚರ್ಚಿತವಾಗಬೇಕು: ಡಾ.ಎಚ್.ಸಿ.ಮಹದೇವಪ್ಪ
ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು, ಮಾನ್ಯ ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳು ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷದ ವ್ಯಾಪ್ತಿಗೆ ಸೀಮಿತವಾಗದ, ಅತ್ಯುನ್ನತ ಸಾಂವಿಧಾನಿಕ ಸ್ಥಾನಗಳಾಗಿವೆ. ಈ ಹುದ್ದೆಗಳು ತಮ್ಮದೇ ಆದ ಘನತೆ, ಗೌರವ, ನಿಷ್ಪಕ್ಷಪಾತತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿನಿಧಿಸುವ ಪರಂಪರೆಯನ್ನು ಹೊಂದಿವೆ ಎಂದಿದ್ದಾರೆ.
ಆದರೆ, ಕಾಂಗ್ರೆಸ್ ತನ್ನ ಅಧಿಕೃತ ಪಕ್ಷದ ಪತ್ರ ಶೀರ್ಷಿಕೆಯಲ್ಲಿ (ಲೆಟರ್ಹೆಡ್) ಈ ಸಾಂವಿಧಾನಿಕ ಹುದ್ದೆಗಳ ಹೆಸರನ್ನು ಬಳಸಿರುವುದು ಅತ್ಯಂತ ಆಕ್ಷೇಪಾರ್ಹ. ಇಂತಹ ನಡೆ ಈ ಹುದ್ದೆಗಳ ಪಕ್ಷಾತೀತ ಸ್ವರೂಪಕ್ಕೆ ಧಕ್ಕೆ ತರುವುದಲ್ಲದೆ, ಅವುಗಳ ಘನತೆ ಮತ್ತು ಗೌರವಕ್ಕೂ ಕಳಂಕ ತರುವ ಪ್ರಯತ್ನವಾಗಿದೆ ಎಂದಿದ್ದಾರೆ.

ನನಗೆ ಗೊತ್ತಿರುವಂತೆ ಮುಂದೆ ಆಯ್ಕೆಯಾಗಬೇಕಿರುವ ಸಭಾಧ್ಯಕ್ಷರ, ಉಪಸಭಾಧ್ಯಕ್ಷರ, ಸಭಾಪತಿಗಳ ಹಾಗೂ ಉಪ ಸಭಾಪತಿಗಳ ಹೆಸರುಗಳನ್ನು ಆಳುವ ಪಕ್ಷದ ಲೆಟರ್ ಹೆಡ್ ನಲ್ಲಿ ದೆಹಲಿಯಿಂದಲೇ ಕಳುಹಿಸುತ್ತಿರುವುದು ಇದೇ ಮೊದಲ ಬಾರಿ. ಇದು ಕೇವಲ ಸಂಸದೀಯ ಸಂಪ್ರದಾಯಗಳ ಉಲ್ಲಂಘನೆಯಷ್ಟೇ ಅಲ್ಲ; ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ಮೂಲಭೂತ ತತ್ವಗಳ ಮೇಲಿನ ನಿರ್ಲಕ್ಷ್ಯದ ಪ್ರತೀಕವಾಗಿದೆ ಎಂದಿದ್ದಾರೆ.
ಬಾಯಲ್ಲಿ ಸಂವಿಧಾನದ ರಕ್ಷಣೆ ಎಂದು ಹೇಳಿಕೊಂಡು, ಆಚರಣೆಯಲ್ಲಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಉನ್ನತ ಹುದ್ದೆಗಳನ್ನು ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ ಕಾಂಗ್ರೆಸ್ನ ದ್ವಂದ್ವ ನೀತಿ ಮತ್ತೊಮ್ಮೆ ಬಹಿರಂಗವಾಗಿದೆ ಎಂದಿದ್ದಾರೆ.




