ಬೆಂಗಳೂರು: ಸಹಕಾರ ಸಚಿವ ಕೆಎನ್ ರಾಜಣ್ಣ ಮತ್ತು ಅವರ ಪುತ್ರ ರಾಜೇಂದ್ರ ಅವರು ತಮ್ಮನ್ನು ಹನಿ ಟ್ರ್ಯಾಪ್ ಮಾಡಲು ಯತ್ನಿಸಲಾಗಿದೆ ಎಂದು ಮಾಡಿರುವ ಆರೋಪ ಕೋಲಾಹಲ ಸೃಪ್ಪಿಸಿರುವ ಬೆನ್ನಲ್ಲೇ, ಇನ್ನೂ ಮೂರು ಸಚಿವರು ಮತ್ತು ಎಐಸಿಸಿ ನಾಯಕರೊಬ್ಬರನ್ನು ಈ ಜಾಲದಲ್ಲಿ ಸಿಲುಕಿಸಲು ಯತ್ನಿಸಿದ ಅಂಶ ಪತ್ತೆಯಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮುಂಬೈ ಕರ್ನಾಟಕ ಪ್ರದೇಶಕ್ಕೆ ಸೇರಿದ ಪ್ರಭಾವಿ ಸಚಿವ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಚಿವ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಚಿವರನ್ನು ಈ ಜಾಲದಲ್ಲಿ ಸಿಲುಕಿಸಲು ಯತ್ನಿಸಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ.
ಈ ನಡುವೆ ಎಐಸಿಸಿ ನಾಯಕರೊಬ್ಬರು ಕೂಡ ಈ ಜಾಲದಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದೆಡೆ ಕೆ ಎನ್ ರಾಜಣ್ಣ ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ 48 ಜನರ ಪೈಕಿ ತಾವು ಕೂಡ ಒಬ್ಬರಾಗಿರಬಹುದು ಎಂದು ಹೇಳುವ ಮೂಲಕ ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹಾದೇವಪ್ಪ ಅಚ್ಚರಿ ಮೂಡಿಸಿದ್ದಾರೆ.
ಹನಿ ಟ್ರ್ಯಾಪ್ ತಂಡ ಮೊದಲಿಗೆ ಸಿಎಂ ಸಿದ್ದರಾಮಯ್ಯ ಆಪ್ತ ವಲಯದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ಸಚಿವರನ್ನು ಕೆಡವಲು ನೋಡಿದೆ. ತಂಡದ ವ್ಯಕ್ತಿಗಳ ಬಗ್ಗೆ ಅನುಮಾನಗೊಂಡ ಆ ಸಚಿವ ಅವರನ್ನು ಹಿಡಿದು ಧರ್ಮದೇಟು ನೀಡಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿದೆ. ಈ ತಂಡಕ್ಕೆ ಯಾರು ಸೂತ್ರಧಾರರು ಎಂಬ ಮಾಹಿತಿಯನ್ನು ತಿಳಿಸಿರುವ ಆ ಸದಸ್ಯರು ಯಾರು ಯಾರನ್ನು ಬಲೆಯಲ್ಲಿ ಬೀಳಿಸುವ ಪ್ರಯತ್ನ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.
ಈ ತಂಡದಿಂದ ಮಾಹಿತಿಯನ್ನು ಕಲೆ ಹಾಕಿದ ನಂತರ ಆ ಸಚಿವರು ಇನ್ನೂ ಯಾರು ಯಾರನ್ನು ಬಲೆಗೆ ಕೆಡವಲು ಸಂಚು ಮಾಡಲಾಗಿದೆ ಎಂಬ ವಿವರ ಪಡೆದು, ಆ ಎಲ್ಲರಿಗೂ ಎಚ್ಚರದಿಂದ ಇರುವಂತೆ ನೀಡಿದ ಸೂಚನೆ ಬಳಿಕ ಸಚಿವ ರಾಜಣ್ಣ ಅವರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಚರ್ಚೆಯಾಗುತ್ತಿದೆ.




