ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಚಿಲಿಯ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯದ ನಡುವೆ ಒಡಂಬಡಿಕೆ
ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಹಾಗೂ ಸ್ಯಾಂಟಿಯಾಗೊ ಡಿ ಚಿಲಿಯ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯವು ಶೈಕ್ಷಣಿಕ ಒಡಂಬಡಿಕೆ (ಎಂಓಯು) ಒಪ್ಪಂದ ಕಾರ್ಯಕ್ರಮ ಜೀವವಿಜ್ಞಾನ ಸಭಾಂಗಣದಲ್ಲಿ ನಡೆಯಿತು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಒಡಂಬಡಿಕೆ ನಂತರ ವಿವಿಯ ಕುಲಪತಿಗಳಾದ ಪ್ರೊ. ಎಂ ಮುನಿರಾಜು ಮಾತನಾಡಿ, ಶಿಕ್ಷಣದ ಭವಿಷ್ಯ, ಆವಿಷ್ಕಾರಗಳು ಹಾಗೂ ಗುಣಮಟ್ಟದ ಸಂಶೋಧನೆಯನ್ನು ಉತ್ತೇಜಿಸಲು ವಿಶ್ವಮಟ್ಟದ ವಿಶ್ವವಿದ್ಯಾಲಯಗಳೊಂದಿಗಿನ ಶೈಕ್ಷಣಿಕ ಒಡಂಬಡಿಕೆಗಳು ಮಹತ್ವದ್ದಾಗಿವೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಅಂತರಾಷ್ಟ್ರೀಯ ವಿವಿಗಳೊಂದಿಗಿನ ಮೂರನೇ ಶೈಕ್ಷಣಿಕ ಒಡಂಬಡಿಕೆಯಾಗಿದೆ ಎಂದರು.
ಗುಣಮಟ್ಟದ ಸಂಶೋಧನಾ ಲೇಖನಗಳು ಮತ್ತು ಉತ್ತಮ ಶಿಕ್ಷಣಕ್ಕೆ ಬೇಕಾದ ಅಂಶಗಳನ್ನು ನಿರೀಕ್ಷಿತ ಮಟ್ಟದಲ್ಲಿ ಸಾಧಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಡಂಬಡಿಕೆಗೆ ನಮ್ಮ ವಿಶ್ವವಿದ್ಯಾಲಯ ಮುಂದಾಗಿದೆ ಎಂದರು.
ಬರ್ನಾರ್ಡೊ ಒ ಹಿಗ್ಗಿನ್ಸ್ ವಿವಿಯ ಪ್ರೊ ಸೀಸರ್ ಮೊರೇಲ್ಸ್ ವರ್ಡೆಜೊ ಮಾತನಾಡಿ, ಉನ್ನತ ಶಿಕ್ಷಣವನ್ನು ಜಗತ್ತಿನ ವಿಶ್ವವಿದ್ಯಾಲಯಗಳೊಂದಿಗೆ ಹಂಚಿಕೊಳ್ಳುವುದು ನಮ್ಮ ಉದ್ದೇಶವಾಗಿದೆ. ಬೋಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರಿಂದ ಜಾಗತಿಕ ಮಟ್ಟದ ಸಂಶೋಧನೆಗಳಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.
ವಿಜಯನಗರ ಶ್ರೀಕೃ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಬರ್ನಾರ್ಡೊ ಒ ಹಿಗ್ಗಿನ್ಸ್ ವಿಶ್ವವಿದ್ಯಾಲಯದ ನಿರ್ದೇಶಕರು ಶೈಕ್ಷಣಿಕ ಒಡಂಬಡಿಕೆಗೆ ಪರಸ್ಪರ ಸಹಿ ಹಾಕುವುದರ ಮೂಲಕ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.
ವಿವಿಯ ಮೌಲ್ಯಮಾಪನ ಕುಲಸಚಿವ ಡಾ. ಎನ್. ಎಂ ಸಾಲಿ, ಶುದ್ಧ ವಿಜ್ಞಾನ ನಿಕಾಯದ ಡೀನರಾದ ಡಾ. ಹನುಮೇಶ್ ವೈದ್ಯ ವೇದಿಕೆಯಲ್ಲಿದ್ದರು.
ವಿವಿಧ ನಿಕಾಯಗಳ ಡೀನರು, ಎಲ್ಲ ವಿಜ್ಞಾನ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




