ನಾಲ್ವರ ಹತ್ಯೆಗೆ ಕಾರಣ ಬಿಚ್ಚಿಟ್ಟ ಆರೋಪಿ ಪ್ರವೀಣ್ ಚೌಗಲೆ

2 years ago

#accused #PraveenChowgale #revealed #reason #behind #killing #nejaru

ಬೆಂಗಳೂರು: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿ ಪ್ರವೀಣ್ ಚೌಗಲೆ ತನ್ನೊಂದಿಗೆ ಅಯ್ನಾಸ್ ಮಾತು ಬಿಟ್ಟಿದ್ದಕ್ಕೆ ಸಂಚು ರೂಪಿಸಿ ಅವರನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ.ಅರುಣ್, ಆರೋಪಿಯನ್ನು ತೀವ್ರ ವಿಚಾರಣೆ ನಡೆಸಿ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳು, ದಾಖಲಾತಿ ಪ್ರಕ್ರಿಯೆ ಮಾಡಿದ್ದೇವೆ ಎಂದರು.

ಅಯ್ನಾಸ್ ಮತ್ತು ಅರೋಪಿ ಪ್ರವೀಣ್ ಗೆ ಎಂಟು ತಿಂಗಳಿಂದ ಪರಿಚಯ ಇತ್ತು. ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ಇಬ್ಬರ ಮಧ್ಯೆ ಗೆಳೆತನ ಇತ್ತು. ಆರೋಪಿ ಪ್ರವೀಣ್ ಆಯ್ನಾಸ್ ಗೆ ಹಲವಾರು ಬಾರಿ ಸಹಾಯ ಮಾಡಿದ್ದನ ಎಂದು ಹೇಳಿದರು.

ಅಯ್ನಾಸ್ ಪ್ರವೀಣ್ ಜೊತೆ ತಿಂಗಳಿಂದ ಸರಿಯಾಗಿ ಮಾತನಾಡುತ್ತಿರಲಿಲ್ಲ. ಇದೇ ಕಾರಣಕ್ಕೆ ಕೊಲೆ ಮಾಡಬೇಕೆಂದು ಪ್ರವೀಣ್ ಪೂರ್ವ ಸಿದ್ಧತೆ ಮಾಡಿಕೊಂಡಿದ್ದ. ಕೊಲೆ ಮಾಡುವ ದಿನ ಅವನು ಟೋಲ್ಗೇಟ್ ಬಳಿ ಕಾರು ಇಟ್ಟು ಬೇರೆ ಬೇರೆ ವಾಹನದಲ್ಲಿ ಡ್ರಾಪ್ ಪಡೆದುಕೊಂಡು ತೃಪ್ತಿನಗರಕ್ಕೆ ಹೋಗಿದ್ದಾನೆ.

ಅಯ್ನಾಸ್ ಮನೆಗೆ ನುಗ್ಗಿದ ಪ್ರವೀಣ್, ಆರಂಭದಲ್ಲಿ ಚಾಕುವಿನಿಂದ ಇರಿದು ಆಕೆಯನ್ನು ಹತ್ಯೆ ಮಾಡಿದ ಬಳಿಕ ಸಾಕ್ಷಿ ನಾಶಗೊಳಿಸಲು ಮನೆಯಲ್ಲಿದ್ದ ಹಸೀನಾ, ಅಫ್ನಾನ್, ಆಸಿಂ ಎಂಬವರನ್ನು ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ನಂತರ ಬೇರೆ ಬೇರೆ ವಾಹನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪರಾರಿಯಾಗಿದ್ದ. ಕೈ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು ಪತ್ನಿಯ ಸಂಬಂಧಿಕರ ಮನೆಗೆ ಹೋಗಿದ್ದಾ ಎಂದು ಮಾಹಿತಿ ನೀಡಿದರು.

ಕುಡಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ವಿಚಾರಣೆ ಮಾಡಿದ್ದೇವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯುತ್ತೇವೆ ಎಂದು ಹೇಳಿದರು.

ಅಲ್ಲದೆ, ಕೈಗೆ ಗಾಯವಾಗಿರುವ ಬಗ್ಗೆ ಪತ್ನಿ ಪ್ರಶ್ನಿಸಿದಾಗ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾನೆ. ನಾಲ್ವರನ್ನು ಕೊಲೆಗೈದು ಚೂರಿಯನ್ನು ಅಡುಗೆ ಮನೆಯಲ್ಲಿ ಇಟ್ಟಿದ್ದಾನೆ. ಪತ್ನಿಗೆ ಸಂಶಯ ಬರದ ಹಾಗೆ ಮನೆಯಲ್ಲಿ ಪ್ರವೀಣ್ ವರ್ತಿಸಿದ್ದ ಎಂದರು.

ನಗರದಲ್ಲಿ ಹೆಚ್ಚುವರಿ ಸಿಸಿಟಿವಿಗಳ ಅಳವಡಿಕೆ ಮಾಡಿದ್ದೇವೆ. ಜಿಲ್ಲೆಯ ಎಲ್ಲಾ ಗಡಿಪ್ರದೇಶದಲ್ಲಿ ಸಿಸಿಟಿವಿ ಕಣ್ಗಾವಲು ಇರಿಸುತ್ತೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಕುಟುಂಬ ತನಿಖೆಗೆ ಬಹಳ ಸಹಕಾರ ಕೊಟ್ಟಿದೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತೇವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ ಎಂದು ಹೇಳಿದರು.

ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ಹಸೀನಾಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ. ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ ಎಂದರು.

ಹತ್ಯೆ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನಗಳು ಇವೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದರು.

ಆ್ಯಪ್ ಲೊಕೇಶನ್ ಮೂಲಕ ಆಯ್ನಾಸ್ ಮನೆಯನ್ನು ಪ್ರವೀಣ್ ಹುಡುಕಿದ್ದಾನೆ. ಆರೋಪಿ ಕೃತ್ಯಕ್ಕೂ ಮೊದಲು ಮನೆಗೆ ಬಂದಿರಲಿಲ್ಲ. ಹೆಚ್ಚುವರಿ ತಾಂತ್ರಿಕ ಮಾಹಿತಿಗಳನ್ನು ನಾವು ಕೊಡುವುದಿಲ್ಲ. ಚಾರ್ಜ್ ಶೀಟ್ ನಲ್ಲಿ ನ್ಯಾಯಾಲಯಕ್ಕೆ ಎಲ್ಲಾ ಮಾಹಿತಿಗಳನ್ನು ದಾಖಲಿಸುತ್ತೇವೆ ಎಂದರು.

Leave a Reply