ಸಿ.ಟಿ.ರವಿ – ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ ಕುರಿತು ಸದನದ ಪರಿಮಿತಿಯಲ್ಲಿ ಕ್ರಮ: ಬಸವರಾಜ ಹೊರಟ್ಟಿ

1 year ago

ಬೆಂಗಳೂರು: ಸದನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 19ರಂದು ಸದನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದ್ದೇನೆ. ದಾಖಲೆಗಳು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ. ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಅಪೇಕ್ಷೆ ಎಂದರು.

ವಿಧಾನಪರಿಷತ್ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಬಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದರು.

Leave a Reply