ಬೆಂಗಳೂರು: ಸದನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 19ರಂದು ಸದನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದ್ದೇನೆ. ದಾಖಲೆಗಳು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ. ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಅಪೇಕ್ಷೆ ಎಂದರು.
ವಿಧಾನಪರಿಷತ್ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಬಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದರು.




