ಬೆಂಗಳೂರು: ಎಸ್ಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಆಡಳಿತರೂಢ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ವಿ.ಎಸ್.ಉಗ್ರಪ್ರ ಇದಕ್ಕೆ ದನಿಗೂಡಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿಪಿ, ಟಿಎಸ್ಪಿ ಹಣವನ್ನು ಯಾರೇ ದುರ್ಬಳಕೆ ಮಾಡಿಕೊಳ್ಳಲಿ ಅವರ ವಿರುದ್ಧ ಕ್ರಮ ಆಗಬೇಕು ಎಂದರು.
ಕೆಲವು ಸಚಿವರಿಗೆ ಅರಿವು ಇಲ್ಲದೇ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುವುದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 180 ಕೋಟಿ ರೂ. ಭ್ರಷ್ಟಾಚಾರದ ಬಳಿಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯದ ಯುವಕರು ನಮ್ಮ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ದುರ್ಬಳಕೆ ಆಗದಂತೆ ಇನ್ನು ಮೇಲೆ ಕಾವಲು ನಾಯಿಗಳಾಗಿ ಕೆಲಸ ಮಾಡಲಿದ್ದೇವೆ ಎಂದರು.




