ಬೆಂಗಳೂರು / ಡೆಹರಾಡೂನ್: ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ. ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.




