ಬೆಂಗಳೂರು / ಡೆಹರಾಡೂನ್: ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿಗೆ ಎಂಬ ಪ್ರದೇಶದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ ಹಾಗೂ ಈ ತಂಡ ಪ್ರಸ್ತುತ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಲಿದೆ. ಇದಲ್ಲದೆ, ಇಂದು ಬೆಳಿಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.



