ಚಾಮರಾಜನಗರ: ಕನ್ನಡ ಭಾಷೆ ಕುರಿತು ಹಗುರವಾಗಿ ಮಾತನಾಡಿರುವ ನಟ ಕಮಲ ಹಾಸನ್ ಅವರು ಪ್ರೀತಿಯಿಂದಲೇ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಅಂತರರಾಷ್ಟ್ರೀಯ ಜನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ ಆಗ್ರಹಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕನ್ನಡ ಭಾಷೆ ಕುರಿತ ನನ್ನ ಹೇಳಿಕೆಗೆ ಅದರ ಮೇಲೆ ನನಗಿರುವ ಪ್ರೀತಿಯೇ ಕಾರಣ ಎಂದು ಹೇಳಿಕೆ ನೀಡಿರುವ ನಟ ಕಮಲ ಹಾಸನ್ ಅವರು ಭಾರತೀಯ ಚಲನಚಿತ್ರ ರಂಗದ ಜನಪ್ರಿಯ ನಟರು. ಅವರ ಮೇಲಿನ ಪ್ರೀತಿಯಿಂದಲೇ ಈ ಮಾತನ್ನು ಹೇಳುತ್ತಿದ್ದೇವೆ ಎಂದಿದ್ದಾರೆ.
ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾರೇ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಎಂದೂ ಸಹಿಸಿಕೊಳ್ಳುವುದಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದಿದ್ದಾರೆ.
ಕಮಲಹಾಸನ್ ಅವರು, ಕನ್ನಡ ಭಾಷೆಯ ಉಗಮದ ಬಗ್ಗೆ ನೀಡಿದ ಈ ಹೇಳಿಕೆಯು ಕನ್ನಡಿಗರಿಗೆ ನೋವನ್ನುಂಟು ಮಾಡಿದೆ. ಅವರು ಈ ಕೂಡಲೇ ಕನ್ನಡಿಗರ ಬಳಿ ಕ್ಷಮೆಯಾಚಿಸುವ ಜೊತೆಗೆ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.



