ಚಾಮರಾಜನಗರ: ಕನ್ನಡ ಭಾಷೆ ಕುರಿತು ಹಗುರವಾಗಿ ಮಾತನಾಡಿರುವ ನಟ ಕಮಲ ಹಾಸನ್ ಅವರು ಪ್ರೀತಿಯಿಂದಲೇ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಅಂತರರಾಷ್ಟ್ರೀಯ ಜನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ ಆಗ್ರಹಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕನ್ನಡ ಭಾಷೆ ಕುರಿತ ನನ್ನ ಹೇಳಿಕೆಗೆ ಅದರ ಮೇಲೆ ನನಗಿರುವ ಪ್ರೀತಿಯೇ ಕಾರಣ ಎಂದು ಹೇಳಿಕೆ ನೀಡಿರುವ ನಟ ಕಮಲ ಹಾಸನ್ ಅವರು ಭಾರತೀಯ ಚಲನಚಿತ್ರ ರಂಗದ ಜನಪ್ರಿಯ ನಟರು. ಅವರ ಮೇಲಿನ ಪ್ರೀತಿಯಿಂದಲೇ ಈ ಮಾತನ್ನು ಹೇಳುತ್ತಿದ್ದೇವೆ ಎಂದಿದ್ದಾರೆ.
ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾರೇ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಎಂದೂ ಸಹಿಸಿಕೊಳ್ಳುವುದಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದಿದ್ದಾರೆ.
ಕಮಲಹಾಸನ್ ಅವರು, ಕನ್ನಡ ಭಾಷೆಯ ಉಗಮದ ಬಗ್ಗೆ ನೀಡಿದ ಈ ಹೇಳಿಕೆಯು ಕನ್ನಡಿಗರಿಗೆ ನೋವನ್ನುಂಟು ಮಾಡಿದೆ. ಅವರು ಈ ಕೂಡಲೇ ಕನ್ನಡಿಗರ ಬಳಿ ಕ್ಷಮೆಯಾಚಿಸುವ ಜೊತೆಗೆ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.




