ರೈತರು ಪ್ರಾಣ ಕಳೆದುಕೊಳ್ಳುವ ಮುನ್ನ ಸೂಕ್ತ ಪರಿಹಾರ ಘೋಷಿಸಬೇಕು: ಆರ್ ಅಶೋಕ್

2 years ago

ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಹಲವಾರು ಜಿಲ್ಲೆಗಳಲ್ಲಿ ಆಹಾರಧಾನ್ಯಗಳು, ಬೇಳೆ ಕಾಳುಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಫಸಲು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಕೈಯಿಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಎದುರಾಗಿದೆ.

ಕಳೆದ ವರ್ಷ ಬರ ಪರಿಸ್ಥಿತಿ ಇದ್ದಾಗ ಸರಿಯಾದ ಸಮಯಕ್ಕೆ ಸಮೀಕ್ಷೆ ನಡೆಸದೆ, ರಾಜಕೀಯ ಮಾಡುವುದರಲ್ಲೇ ಕಾಲಹರಣ ಮಾಡಿದ್ದ @INCKarnataka ಸರ್ಕಾರ, ಈಗಲಾದರೂ ಸರಿಯಾದ ಸಮಯಕ್ಕೆ ಬೆಳೆಹಾನಿ ಸಮೀಕ್ಷೆ ನಡೆಸಿ ಸಕಾಲಕ್ಕೆ ಪರಿಹಾರ ರೈತರ ಕೈಸೇರುವಂತೆ ನೋಡಿಕೊಳ್ಳಬೇಕು.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,500ಕ್ಕು ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗ ಇನ್ನಷ್ಟು ರೈತರು ಪ್ರಾಣ ಕಳೆದುಕೊಳ್ಳುವ ಯೋಚನೆ ಮಾಡುವ ಮುನ್ನ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಕೃಷಿ ಸಚಿವ @NCheluvarayaS ಅವರನ್ನ ಒತ್ತಾಯಿಸುತ್ತೇನೆ.

– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ

Leave a Reply