ಬೆಂಗಳೂರು: ತಮ್ಮ ಆಪ್ತಳಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಜೈಲು ಸೇಫ್ ಅಲ್ಲ ಎಂದು ಹೇಳಲಾಗುತ್ತಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಹಲವು ಕುಖ್ಯಾತರು ಖೈದಿಗಳಾಗಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಮೇಲೆ ದಾಳಿ ನಡೆಯಬಹುದು ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ದರ್ಶನ್ನನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಅವಕಾಶ ಕೊಡುವಂತೆ ಎಸ್ಪಿಪಿ ಈಗಾಗಲೇ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ. ಬೇರೆ ಜೈಲಿಗೆ ವರ್ಗಾವಣೆ ಮಾಡಲು ಮನವಿ ಮಾಡಿರುವ ಕಾರಣಗಳೆಂದರೆ, ಜನಪ್ರಿಯ ನಟನಾಗಿರುವುದರಿಂದ ಹಲವರು ಪರಿಚಯವಿದ್ದು ಕೈದಿಗಳ ನಡುವೆ ಗಲಾಟೆಯಾಗುವ ಸಾಧ್ಯತೆ ಇದೆ.
ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು. ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಕಾಂಟ್ಯಾಕ್ಟ್ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ.
ಜೊತೆಗೆ ದರ್ಶನ್ನನ್ನು ನೋಡಲು ಕೈದಿಗಳಿಂದ ಜೈಲಿನೊಳಗೆ ಹಾಗೂ ಅಭಿಮಾನಿಗಳಿಂದ ಜೈಲಿನ ಹೊರಗೆ ದೊಂಬಿ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಎಸ್ಪಿಪಿ ಮನವಿ ಸಲ್ಲಿಸಿದ್ದಾರೆ.



