ಬೆಂಗಳೂರು: ತಮ್ಮ ಆಪ್ತಳಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಜೈಲು ಸೇಫ್ ಅಲ್ಲ ಎಂದು ಹೇಳಲಾಗುತ್ತಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಹಲವು ಕುಖ್ಯಾತರು ಖೈದಿಗಳಾಗಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಮೇಲೆ ದಾಳಿ ನಡೆಯಬಹುದು ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ದರ್ಶನ್ನನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಲು ಅವಕಾಶ ಕೊಡುವಂತೆ ಎಸ್ಪಿಪಿ ಈಗಾಗಲೇ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ. ಬೇರೆ ಜೈಲಿಗೆ ವರ್ಗಾವಣೆ ಮಾಡಲು ಮನವಿ ಮಾಡಿರುವ ಕಾರಣಗಳೆಂದರೆ, ಜನಪ್ರಿಯ ನಟನಾಗಿರುವುದರಿಂದ ಹಲವರು ಪರಿಚಯವಿದ್ದು ಕೈದಿಗಳ ನಡುವೆ ಗಲಾಟೆಯಾಗುವ ಸಾಧ್ಯತೆ ಇದೆ.
ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು. ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಕಾಂಟ್ಯಾಕ್ಟ್ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ.
ಜೊತೆಗೆ ದರ್ಶನ್ನನ್ನು ನೋಡಲು ಕೈದಿಗಳಿಂದ ಜೈಲಿನೊಳಗೆ ಹಾಗೂ ಅಭಿಮಾನಿಗಳಿಂದ ಜೈಲಿನ ಹೊರಗೆ ದೊಂಬಿ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಎಸ್ಪಿಪಿ ಮನವಿ ಸಲ್ಲಿಸಿದ್ದಾರೆ.




