ಬಳ್ಳಾರಿ: ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕು ಕೃಷಿಕ ಸಮಾಜದ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿಗೆ ಚುನಾವಣೆ ಘೋಷಣೆಯಾಗಿದ್ದು, ಡಿ.15ರಂದು ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ದಯಾನಂದ ಎಂ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನ.30 ರಿಂದ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬಳ್ಳಾರಿ ಮತ್ತು ಕುರುಗೋಡು ರೈತ ಸಂಪರ್ಕ ಕೇಂದ್ರಗಳಲ್ಲಿ ನಾಮಪತ್ರ ವಿತರಣೆ ಮಾಡಲಾಗುವುದು.
ಪ್ರತಿ ತಾಲ್ಲೂಕು ಕಾರ್ಯಕಾರಿ ಸಮಿತಿ 15 ಸದಸ್ಯ ಸ್ಥಾನಗಳಿದ್ದು, ಕೃಷಿಕ ಸಮಾಜದ ಅಜೀವ ಸದಸ್ಯರು ತಮ್ಮ ಉಮೇದುವಾರಿಕೆಯ ನಾಮಪತ್ರವನ್ನು 7 ದಿನಗಳ ಮುಂಚಿತವಾಗಿ ರೂ.250 ಠೇವಣಿಯ ಮೂಲ ರಶೀದಿ ಹಾಗೂ ಪಹಣಿಯೊಂದಿಗೆ ಚುನಾವಣಾಧಿಕಾರಿಗೆ ಅರ್ಜಿ ಮೂಲಕ ನಾಮಪತ್ರ ಸಲ್ಲಿಸಬೇಕು.
ನಾಮಪತ್ರ ಸಲ್ಲಿಸಲು ಡಿಸೆಂಬರ್-06 ರ ಬೆಳಿಗ್ಗೆ 11 ರಿಂದ ಸಂಜೆ 3 ರವರೆಗೆ ಸಮಯ ನಿಗದಿಪಡಿಸಲಾಗಿದೆ. ಡಿಸೆಂಬರ್-15 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಮತ ಏಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.8277934294 ಗೆ ಸಂಪರ್ಕಿಸಬಹುದು.




