ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಜೂನ್ ತಿಂಗಳ ಮೊದಲ ಪಾಕ್ಷಿಕದಲ್ಲಿ ಮಳೆಯಾಗುತ್ತಿದ್ದು, ಮುಂಚಿತವಾಗಿ ಬಿತ್ತಿದ ಹೆಸರು, ಉದ್ದು, ಸೋಯಾಅವರೆ, ಶೇಂಗಾ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆಯಾದರೂ, ಭೂಮಿಯ ತೇವಾಂಶ ಹೆಚ್ಚಿಗೆ ಆಗಿರುವ ಕಾರಣ ಈಗಾಗಲೇ ಹುಟ್ಟಿರುವ ಸೋಯಾಅವರೆ, ಹೆಸರು ಹಾಗೂ ಉದ್ದಿನ ಬೆಳೆಗಳು ಹಳದಿ ವರ್ಣಕ್ಕೆ ತಿರುಗುವ ಸಾಧ್ಯತೆ ಇರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸಬೇಕು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ರೈತರು ಈ ಕ್ರಮಗಳನ್ನು ಪಾಲಿಸಬೇಕು. ಹೊಲದಲ್ಲಿ, ಒಡ್ಡುಗಳಲ್ಲಿ ನಿಂತಿರುವ ಹೆಚ್ಚುವರಿ ನೀರನ್ನು ಹರಿ ಮಾಡುವುದರ ಮೂಲಕ ನೀರನ್ನು ಹೊರಹಾಕಬೇಕು. ಹೆಸರು, ಉದ್ದು, ಅಲಸಂದಿ, ಸೋಯಾಅವರೆ, ಶೇಂಗಾ ಇತ್ಯಾದಿ ಬೆಳೆಗಳು ಹಳದಿ ವರ್ಣಕ್ಕೆ ತಿರುಗುತ್ತಿದ್ದಲ್ಲಿ, ಎಲೆಗಳ ಮೂಲಕ ನೀರಿನಲ್ಲಿ ಕರಗುವ ರಸಗೊಬ್ಬರಗಳಾದ, 12:61:00, 0:0:50, 13:00:45, 00:52:34, 19:19:19, ಇವುಗಳಲ್ಲಿ ಯಾವುದಾದರೂ ಒಂದನ್ನು ಪ್ರತಿ ಲೀಟರ್ ನೀರಿಗೆ 5 ರಿಂದ 10 ಗ್ರಾಂ. ಬೆರೆಸಿ ಬೆಳೆಗಳ ಮೇಲೆ ಸಿಂಪಡಿಸಬೇಕು.
ಹಳದಿ ನಂಜಾಣು ರೋಗ ಕಂಡುಬಂದಲ್ಲಿ ಅಂತಹ ಬಾಧಿತ ಸಸಿಗಳನ್ನು ಕಿತ್ತು ಒಂದು ಚೀಲದಲ್ಲಿ ತುಂಬಿ ಹೊಲದಿಂದ ಹೊರಗೆ ಹೋಗಿ ಸುಟ್ಟು ಹಾಕಬೇಕು ಇಲ್ಲವೇ ಮಣ್ಣಿನಲ್ಲಿ ಗುಂಡಿ ತೋಡಿ ಹೂಳಬೇಕು. ನೀರು ನಿಂತ ಸನ್ನಿವೇಶದಲ್ಲಿ ಯೂರಿಯಾ ಗೊಬ್ಬರ ಬಳಕೆ ಮಾಡಬಾರದು. ಇದರಿಂದ ರೋಗಗಳ ಬಾಧೆ ಹೆಚ್ಚಾಗುವುದು. ಹದ ಬಂದ ಕೂಡಲೆ ಅಂತರ್ ಬೇಸಾಯ ಕೈಗೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




