ವಾಯು ಮಾಲಿನ್ಯ ನಿಯಂತ್ರಣ ಅರಿವು ಕಾರ್ಯಕ್ರಮ

1 year ago

ಶಿವಮೊಗ್ಗ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಶಿವಮೊಗ್ಗದ ವತಿಯಿಂದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ 2024 ರ ಪ್ರಯುಕ್ತ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ವಾಯು ಮಾಲಿನ್ಯ ನಿಯಂತ್ರಣ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಮೋಟಾರು ವಾಹನ ನಿರೀಕ್ಷಕ ಪಿ. ಎಂ. ಮಲ್ಲೇಶಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ, ಅಧೀಕ್ಷಕರಾದ ರಾಮಚಂದ್ರಪ್ಪ, ಮೋಹನ್ ಕುಮಾರ್, ಸಿಬ್ಬಂದಿ ವರ್ಗದವರು, ಕಾಲೇಜಿನ ಪ್ರಾಂಶುಪಾಲ ಸುಖೇಶ್ ದೇವಾಡಿಗ, ಕಾಲೇಜಿನ ಬಸ್ ಚಾಲಕರು, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply