ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರಿನ ಉತ್ತರ ಭಾಗದಲ್ಲಿನ ರಸ್ತೆಗಳಲ್ಲಿ ಕಿಲೋಮೀಟರ್ ನಷ್ಟು ದೂರದವರೆಗೆ ವಾಹನಗಳು ನಿಂತಿವೆ. ಸಮಯಕ್ಕೆ ಸರಿಯಾಗಿ ಕಚೇರಿ ಮತ್ತು ಹೋಗಬೇಕಾದ ಸ್ಥಳಗಳಿಗೆ ತಲುಪಲಾಗದೆ ಹಿಡಿಶಾಪ ಹಾಕುತ್ತಿದ್ದಾರೆ. ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಕೇಳಿಬರುತ್ತಿದ್ದರೆ ರಸ್ತೆಗಳಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ನಗರದಲ್ಲಿ ಇಂದಿನಿಂದ ಆರಂಭವಾಗಿರುವ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಹಿನ್ನೆಲೆಯಲ್ಲಿ ಮೊದಲ ದಿನವೇ ಬೆಂಗಳೂರಿಗರಿಗೆ ಸಂಚಾರ ದಟ್ಟಣೆಯ ಬಿಸಿ ತಟ್ಟಿದೆ. ಏರ್ ಶೋ ನಡೆಯುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೆಳಗ್ಗೆಯಿಂದಲೇ ವಾಹನ ಸವಾರರು ಪರದಾಡುವಂತಾಗಿತ್ತು. ಕಿಲೋಮೀಟರ್ಗಟ್ಟಲೇ ವಾಹನಗಳು ನಿಂತ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟರು. ಏರ್ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಟಾಲ್ಗಳಿಗೆ ಬರುವ ಗಣ್ಯರಿಗೂ ಟ್ರಾಫಿಕ್ ಬಿಸಿ ತಟ್ಟಿದೆ. ಎರಡು ಗಂಟೆಗೂ ಹೆಚ್ಚು ಕಾಲ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಿದವು.
ಏರ್ ಶೋ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಏರ್ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಸಂಚಾರವನ್ನು ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರುವ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ.




