ಮೈಸೂರು: ನಾಯಕತ್ವ ಕುರಿತಾಗಿ ಉಂಟಾಗಿದ್ದ ಎಲ್ಲ ಗೊಂದಲಗಳು ಇತ್ಯರ್ಥಗೊಂಡಿವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ದೇವತೆ, ಚಾಮುಂಡೇಶ್ವರಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಈ ಅವಧಿಯಲ್ಲಿ ಮತ್ತೊಬ್ಬ ಮುಖ್ಯಮಂತ್ರಿ ಬರುತ್ತಾರೆ ಎಂಬ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ ಎಂದರು.
ಹೈಕಮಾಂಡ್ ಅಧಿಕಾರದ ಹಂಚಿಕೆ ಒಪ್ಪಂದದ ವಿಚಾರ ನಮ್ಮ ಗಮನಕ್ಕೆ ತಂದು ಮಾಡಿದ್ದರೆ ಇಷ್ಟೆಲ್ಲಾ ಗೊಂದಲಗಳು ಆಗುತ್ತಿರಲಿಲ್ಲ ಎಂದರು.
ಅವರವರೇ ಚರ್ಚೆಗಳು ಮಾಡಿ ನಿರ್ಧಾರ ಮಾಡಿಕೊಂಡಿದ್ದರು. ಹೀಗಾಗಿ ಈ ಗೊಂದಲಗಳು ಸೃಷ್ಟಿಯಾದವು. ಈಗ ಗೊಂದಲಗಳು ಬಗೆಹರಿದಂತೆ ಕಾಣುತ್ತಿದೆ. ಈ ವಿಚಾರದಲ್ಲಿ ಅಭಿಪ್ರಾಯ ಹೇಳಲು ಹಿರಿಯರು ಕಿರಿಯರು ಎಂಬುದು ಇರುವುದಿಲ್ಲ ಎಂದರು.
ಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಅವರು ಈ ಹಿಂದೆಯೂ ಹೇಳಿದ್ದರು, ಈಗಲೂ ಅದನ್ನೇ ಹೇಳಿದ್ದಾರೆ. ಮತ್ತೊಬ್ಬರಿಗೆ ಅವಕಾಶ ಇದೆಯೂ ಎಲ್ಲವೋ ಎಂಬುದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.




