ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯಲ್ಲಿ ಕಾರ್ಯೋನ್ಮುಖರಾಗಿ: ಡಿ ಕೆ ಶಿವಕುಮಾರ್

1 year ago

ರಾಜ್ಯ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗು ಬೃಹತ್ ಸಮಾವೇಶ ಹಮ್ಮಿಕೊಂಡಿರುವುದು ಈಗಾಗಲೇ ತಮಗೆ ತಿಳಿದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ (ಮುನ್ಸಿಪಲ್ ಮೈದಾನ) ದಿನಾಂಕ 20-05-2025 ರಂದು ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರು, ಲೋಕಸಭೆ ವಿರೋಧಪಕ್ಷದ ನಾಯಕರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಹಟ್ಟಿ, ಹಾಡಿ, ತಾಂಡ, ಪಾಳ್ಯ, ಮಜುರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅಲ್ಲಿ ವಾಸಿಸುತ್ತಿರುವ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಸಲುವಾಗಿ ತಾವುಗಳು ಈ ಕೆಳಗೆ ನಿಯೋಜಿಸಲಾದ ವಿಧಾನಸಭೆ ಕ್ಷೇತ್ರಕ್ಕೆ ತೆರಳಿ ದಿನಾಂಕ 15-05-2025ರ ಒಳಗಾಗಿ ಸಂಬಂಧಿಸಿದ ವಿಧಾನಸಭೆ ಕ್ಷೇತ್ರದ ಸ್ಥಳೀಯ ಮುಖಂಡರ ಸಭೆಯನ್ನು ಆಯೋಜಿಸಿ ಸದರಿ ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯಲ್ಲಿ ಕಾರ್ಯೋನ್ಮುಖರಾಗಲು ಈ ಮೂಲಕ ಕೋರುತ್ತೇನೆ.

ಹಾಗೆಯೇ ಮೇಲ್ಕಂಡ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಥಳೀಯ ಅಧಿಕಾರಿಗಳ ಸಭೆಯನ್ನು ಕರೆದು, ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗೂ ಈ ಸಮಾವೇಶ ಯಶಸ್ವಿಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಎಲ್ಲ ರೀತಿಯ ಸಹಕಾರ ನೀಡಲು ಸೂಚನೆ ನೀಡುವಂತೆ ಕೋರುತ್ತೇನೆ.

– ಡಿ ಕೆ ಶಿವಕುಮಾರ್, ಡಿಸಿಎಂ

Leave a Reply