ಬೆಂಗಳೂರು: ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಎಲ್ಲಾ ಪಕ್ಷಗಳು ಸಂಪೂರ್ಣ ಬೆಂಬಲ ನೀಡಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕೂಡ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಇದು ನಮ್ಮೆಲ್ಲರ ಒತ್ತಾಯವಾಗಿದೆ ಎಂದರು.
ಈಗಾಗಲೇ ನಾವು ಅವರಿಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದೇವೆ. ಜನರ ಅನಿಸಿಕೆ ಹಾಗೂ ದೇಶದಲ್ಲಿ ಇರುವ ಭಾವನೆ ಜೊತೆಗೆ ಎಲ್ಲಾ ಪಕ್ಷಗಳು ಅವರಿಗೆ ಅಧಿಕಾರ ನೀಡಿದ್ದೇವೆ. ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ಅಧಿಕಾರ ಮಾಡಲು ಕೊಟ್ಟಿದ್ದೇವೆ. ಅದನ್ನು ಅವರು ಉಪಯೋಗ ಮಾಡಿಕೊಳ್ಳಲಿ, ತಮ್ಮ ಕೆಲಸವನ್ನು ಅವರು ಮಾಡಲಿ. ದೇಶದ ರಕ್ಷಣೆ ಮಾಡುವುದಕ್ಕೆ ಆದಷ್ಟು ಬೇಗನೆ ಒಳ್ಳೆಯ ಹೆಜ್ಜೆಯನ್ನು ಇಡಬೇಕು ಎಂದರು.
ಪ್ರಧಾನಿ ಭಾವಚಿತ್ರವನ್ನು ವಿರೂಪಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್ ಟೀಕೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ವ್ಯಕ್ತಿಗೆ, ಯಾರೇ ಇರಲಿ, ಅದು ಪ್ರಧಾನಮಂತ್ರಿಯೇ ಇರಲಿ, ಯಾವುದೇ ಮುಖಂಡರಿಗೇ ಇರಲಿ, ಅವರ ಗೌರವಕ್ಕೆ ಧಕ್ಕೆ ತರುವಂತ ಕೆಲಸ ಮಾಡಬಾರದು. ಅವರಾಗಲಿ ನಮ್ಮವರೇ ಆಗಲಿ ಈ ರೀತಿ ಮಾಡೋದು ಸರಿಯಲ್ಲ ಎಂದರು.
ಉಗ್ರರ ವಿರುದ್ಧ ಸಮರ ಹಾಗೂ ಪಾಕಿಸ್ತಾನ ವಿರುದ್ಧದ ಕ್ರಮದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೈಗೊಂಡಿರುವ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಬೇಕು. ಈ ಕುರಿತಂತೆ ಪಕ್ಷದ ಎಲ್ಲರಿಗೂ ಸುತ್ತೋಲೆಯ ಮೂಲಕ ಸ್ಪಷ್ಟನೆ ಕಳುಹಿಸಲಾಗಿದೆ. ಅದನ್ನು ಮೀರಿ ಯಾರಾದರೂ ನಿಲುವು ಪ್ರಕಟಿಸಿದರೆ ಅವರ ವಿರುದ್ಧ ಪಕ್ಷ ಕ್ರಮ ಜರುಗಿಸಲಿದೆ ಎಂದು ಎಚ್ಚರಿಕೆ ನೀಡಿದರು.




