ಬೆಂಗಳೂರು: ರಾಜ್ಯದಲ್ಲಿನ 15 ವರ್ಷಕ್ಕಿಂತ ಹಳೆಯ ಎಲ್ಲಾ ರೀತಿಯ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರದ ಆದೇಶದಂತೆ ರಾಜ್ಯ ಸರ್ಕಾರ ಈ ಸೂಚನೆ ನೀಡಿದೆ.
ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ 5 ಸಾವಿರ ವಾಹನಗಳನ್ನು ನಾಶಪಡಿಸಲು ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿರುವ ಸ್ಕ್ರಾಪಿಂಗ್ ಘಟಕಗಳಲ್ಲಿ ಸ್ಕ್ರಾಪ್ ಮಾಡಲು ಸರ್ಕಾರದ ಕಾರ್ಯದರ್ಶಿ ಆದೇಶಿಸಿದ್ದಾರೆ.
ಪರಿಸರ ಸಂರಕ್ಷಣೆ ದೃಷ್ಟಿಯಿಂದ ನೋಂದಣಿಯಾಗಿ 15 ವರ್ಷ ಮೇಲ್ಪಟ್ಟ ವಾಹನಗಳನ್ನು ನಾಶ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಅದರಂತೆ ರಾಜ್ಯ ಸರ್ಕಾರ ತನ್ನ ಅಧೀನ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಹಳೆ ವಾಹನಗಳ ನಾಶಕ್ಕೆ ಮುಂದಾಗಿದೆ.



