ಬೆಂಗಳೂರು: ಮಗಳ ಮೇಲೆ ಅತ್ಯಾಚಾರ ನಡೆದಿದೆ. ನನಗೆ ನ್ಯಾಯ ಕೊಡಿಸಲು ಎಸ್.ಐ.ಟಿ ರಚಿಸುವಂತೆ ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಳಿ ತೆರಳಿದ ವೇಳೆ ನನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸಲಾಗಿದೆ ಎಂದು ತಾಯಿಯೊಬ್ಬರು ಆರೋಪಿಸಿ ದೂರು ನೀಡಿದ್ದಾರೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಸದರಿ ದೂರಿನ ಆಧಾರದಲ್ಲಿ ಸದಾಶಿವ ನಗರ ಪೊಲೀಸರು ಪೋಕ್ಸೋ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಫೆಬ್ರವರಿ 2ರಂದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ನೆರವು ಕೋರಲು ಹೋದ ಸಮಯದಲ್ಲಿ ಬಾಲಿಕಯನ್ನು ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಜೊತೆಗೆ, ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದರು. ಬಾಲಕಿ ಭಯಗೊಂಡಿದ್ದರಿಂದ ತಡವಾಗಿ ದೂರು ದಾಖಲಿಸುತ್ತಿರುವುದಾಗಿ ತಾಯಿ ಹೇಳಿಕೆ ನೀಡಿದ್ದಾರೆ.




