ಬೆಂಗಳೂರು: ರಾಜ್ಯದ ಉನ್ನತ ಪೊಲೀಸ್ ಆಡಳಿತ ವ್ಯವಸ್ಥೆಯಲ್ಲಿ ಭಡ್ತಿ ಮತ್ತು ನೇಮಕ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಅಲೋಕ್ ಮೋಹನ್ ಅವರ ಅಧಿಕಾರ ಅವಧಿಯನ್ನು ಸರ್ಕಾರ ನಾಲ್ಕು ತಿಂಗಳು ವಿಸ್ತರಿಸಲು ಚಿಂತನೆ ನಡೆಸಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಒಂದು ವೇಳೆ ರಾಜ್ಯ ಸರ್ಕಾರ ಇಂತಹ ಆದೇಶ ಹೊರಡಿಸಿದ್ದೇ ಆದಲ್ಲಿ ಹಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಡ್ತಿ ವಿಳಂಬವಾಗಲಿದೆ. ಇದರಿಂದ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದ ಹಲವರಿಗೆ ನಿರಾಸೆಯಾಗಲಿದೆ.
ಸದ್ಯ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅಧಿಕಾರಾವಧಿ 4 ತಿಂಗಳು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಅವರು ಇದೇ ಏಪ್ರಿಲ್ 30ಕ್ಕೆ ಸೇವಾನಿವೃತ್ತಿ ಹೊಂದಬೇಕಿದೆ. ಆದರೆ ಪೊಲೀಸ್ ಮಹಾನಿರ್ದೇಶಕ ಹುದ್ದೆ ಅಲಂಕರಿಸುವ ವ್ಯಕ್ತಿ ಎರಡು ವರ್ಷಗಳ ಕಾಲ ಈ ಹುದ್ದೆ ನಿರ್ವಹಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಇದರ ಅನ್ವಯ ಅವರ ಅಧಿಕಾರ ಅವಧಿ ಆಗಸ್ಟ್ವರೆಗೆ ವಿಸ್ತರಣೆ ಆಗಲಿದೆ. ಈ ಸಂಬಂಧ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್, 4 ತಿಂಗಳು ಅವಧಿ ವಿಸ್ತರಣೆಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕನಿಷ್ಠ 2 ವರ್ಷಗಳ ಅಧಿಕಾರ ಅವಧಿ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಕೇಂದ್ರ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ಪ್ರವೀಣ್ ಸೂದ್ ತೆರಳಿದ ಬಳಿಕ ತೆರವಾದ ಡಿಜಿ-ಐಜಿಪಿ ಹುದ್ದೆಗೆ 2023ರ ಮೇ 23ರಂದು ಸೇವಾ ಹಿರಿತನದ ಆಧಾರದ ಮೇರೆಗೆ ನೇಮಕ ಮಾಡಲಾಗಿತ್ತು.
ಮೊದಲು ಪ್ರಭಾರ ಡಿಜಿಪಿಯಾಗಿ ಕಾರ್ಯನಿರ್ವಹಿಸಿ 4 ತಿಂಗಳ ಬಳಿಕ ಹುದ್ದೆ ಖಾಯಂಗೊಂಡಿತು. ಪ್ರಭಾರ ಅವಧಿಯನ್ನು ಪರಿಗಣಿಸದೆ ಖಾಯಂ ಅವಧಿ ಮಾತ್ರ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಈ ಮನವಿಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಇಲಾಖೆಯಲ್ಲಿ ಕೆಲ ಹಿರಿಯ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.



