ಮಹತ್ವಾಕಾಂಕ್ಷೆಯ ಭೂ ಸುರಕ್ಷಾ ಯೋಜನೆ: ಕೃಷ್ಣ ಬೈರೇಗೌಡ

2 years ago

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭೂ ಸುರಕ್ಷಾ ಕಾರ್ಯಕ್ರಮ ಫೆ.01 ರಿಂದಲೇ ಶುರುವಾಗಿದೆ. ಈಗಾಗಲೇ ಪ್ರಾಯೋಗಿಕವಾಗಿ 31 ತಾಲೂಕುಗಳ ಭೂ ದಾಖಲೆಗಳನ್ನು ಡಿಜಿಟಲೀರಣಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕಂದಾಯ ಆಯುಕ್ತಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೊಸದಾಗಿ ಆಯ್ಕೆಯಾದ 1,000 ಪರವಾನಗಿ ಭೂಮಾಪಕರುಗಳಿಗೆ ಪರವಾನಗಿ ಪ್ರಮಾಣ ಪತ್ರ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.

ತಹಶೀಲ್ದಾರ್, ನಾಡ ಕಚೇರಿ ಸೇರಿದಂತೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿರುವ ಭೂ ದಾಖಲೆಗಳನ್ನೂ ಡಿಜಿಟಲೀಕರಿಸಿ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು, ಆ ಮೂಲಕ ಸರ್ಕಾರಿ ಕಚೇರಿಗಳಿಗೆ ಅವರ ಅನಗತ್ಯ ಓಡಾಡಕ್ಕೆ ಪೂರ್ಣ ವಿರಾಮ ಇಡುವುದು ಈ ಯೋಜನೆಯ ಉದ್ದೇಶ. ಈ ಯೋಜನೆ ಈಗಾಗಲೇ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ರಾಜ್ಯದ್ಯಂತ ಎಲ್ಲಾ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದರು.

Leave a Reply