ಬೆಂಗಳೂರು: ಗಡಿನಾಡ ಅಭಿವೃದ್ಧಿ ನಾಟಕ ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2024-25 ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಖ್ಯಾತ ಹಿಂದೂಸ್ತಾನಿ ಗಾಯಕ ಬೆಳಗಾವಿಯ ಅನಂತ ತೆರದಾಳ ಅವರಿಗೆ ನಿಜಗುಣ ಪುರಂದರ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರಕಟಿಸಿದರು.
ಬಸವ ರಾಷ್ಟ್ರೀಯ ಪುರಸ್ಕಾರ – ಡಾ. ಎಸ್. ಆರ್. ಗುಂಜಾಳ ಧಾರವಾಡ.
ಶ್ರೀ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ – ಪಂಡಿತರತ್ನ ಎ.ಶಾಂತಿರಾಜ, ಶಾಸ್ತ್ರೀ ಟ್ರಸ್ಟ್ ಬೆಂಗಳೂರು
ಟಿ ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ – ಬಸಪ್ಪ ಎಚ್ ಭಜಂತ್ರಿ ಬಾಗಲಕೋಟೆ
ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ – ಬೇಗಂ ಪರ್ವೀನ್ ಸುಲ್ತಾನ್, ಮುಂಬಯಿ
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ – ಕೆ ರಾಜಕುಮಾರ, ಕೋಲಾರ
ಅಕ್ಕಮಹಾದೇವಿ ಪ್ರಶಸ್ತಿ – ಡಾ ಹೇಮಾ ಪಟ್ಟಣಶೆಟ್ಟಿ, ಧಾರವಾಡ
ಪಂಪ ಪ್ರಶಸ್ತಿ – ಡಾ ಬಿ ಎ ವಿವೇಕ ರೈ, ದಕ್ಷಿಣ ಕನ್ನಡ
ಪ್ರೋ. ಕೆ. ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ – ಸ.ರಘುನಾಥ್, ಕೋಲಾರ
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ – ಡಾ. ವೈ. ಸಿ. ಭಾನುಮತಿ, ಹಾಸನ
ಬಿ.ವಿ. ಕಾರಂತ ಪ್ರಶಸ್ತಿ – ಜೆ. ಲೋಕೇಶ್, ಬೆಂಗಳೂರು
ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ – ಕೆ. ನಾಗರತ್ನಮ್ಮ, ಮರಿಯಮ್ಮನಹಳ್ಳಿ ವಿಜಯನಗರ
ಡಾ.ಸಿದ್ಧಲಿಂಗಯ್ಯ ಸಾಹಿತ್ಯ ಪ್ರಶಸ್ತಿ – ಡಾ.ಎಲ್ ಹನುಮಂತಯ್ಯ, ಬೆಂಗಳೂರು
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ – ಎಂ ಜೆ ಕಮಲಾಕ್ಷಿ, ಬೆಂಗಳೂರು
ಜಕಣಾಚಾರಿ ಪ್ರಶಸ್ತಿ – ಎಂ. ರಾಮಮೂರ್ತಿ, ಬೆಂಗಳೂರು
ಜಾನಪದ ಶ್ರೀ ಪ್ರಶಸ್ತಿ – ನಿಂಗಪ್ಪ ಭಜಂತ್ರಿ ಕಲ್ಬುರ್ಗಿ ಮತ್ತು ದೊಡ್ಡಗವಿಬಸಪ್ಪ, ಚಾಮರಾಜನಗರ
ನಿಜಗುಣ ಪುರಂದರ ಪ್ರಶಸ್ತಿ – ಅನಂತ ತೆರದಾಳ, ಬೆಳಗಾವಿ ( ಹಿಂದುಸ್ತಾನಿ ಗಾಯನ )
ಕುಮಾರವ್ಯಾಸ ಪ್ರಶಸ್ತಿ – ಡಾ.ಎ ವಿ ಪ್ರಸನ್ನ, ಹಾಸನ ( ಗಮಕ ವ್ಯಾಖ್ಯಾನ)
ಶಾಂತಲಾ ನಾಟ್ಯ ಪ್ರಶಸ್ತಿ – ಪದ್ಮಿನಿ ರವಿ, ಬೆಂಗಳೂರು ( ಭರತನಾಟ್ಯ)
ಸಂತ ಶಿಶುನಾಳ ಷರೀಫ್ ಪ್ರಶಸ್ತಿ – ಪ್ರೊ. ಮಲ್ಲಣ್ಣ, ಚಾಮರಾಜನಗರ ( ಸುಗಮ ಸಂಗೀತ )




