ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ ಬಗ್ಗೆ ನಗರದ ಜನರಿಗೆ ಯಾವುದೇ ಮಾಹಿತಿ ನೀಡಿಲ್ಲ. ನಾನು ಅಧಿಕಾರಿಗಳನ್ನು ಈ ಬಗ್ಗೆ ಕೇಳಿದಾಗ 124 ಇಲಾಖೆಗಳಿಂದ ಅನುಮತಿ ಪಡೆಯಬೇಕಿದೆ ಎಂದು ತಿಳಿದುಬಂತು. ನನ್ನನ್ನೇ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಾರೆಂದು ಹೇಳಿದ್ದಾರೆ. ಇಂತಹ ಯೋಜನೆ ಮಾಡಲು ಇವರಿಗೆ ನೈಪುಣ್ಯತೆ ಇದೆಯೇ ಎಂದು ಸಾಬೀತುಪಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಸ್ತೆಗುಂಡಿಗಳನ್ನು ಮುಚ್ಚಿಸಲಿ. ಗುಂಡಿ ಮುಚ್ಚಲು ಆಗದವರು ಸುರಂಗ ಹೇಗೆ ಮಾಡುತ್ತಾರೆ? ಇದಕ್ಕೆ ಹಣ ಎಲ್ಲಿದೆ? ಎಂದು ಪ್ರಶ್ನಿಸಿದರು.
ಬಿಜೆಪಿಯವರು ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಮೊದಲು ರಸ್ತೆಗುಂಡಿ ಮುಚ್ಚಿಸಲಿ, ಕಸ ನಿರ್ವಹಣೆ ಮಾಡಲಿ. ಯೋಜನೆ ಖಂಡಿತ ಮಾಡುತ್ತೇವೆ ಎಂದು ದೌರ್ಜನ್ಯದಂತೆ ಮಾತನಾಡಬಾರದು. ಲಾಲ್ಬಾಗ್, ಕೆಂಪೇಗೌಡ ಗೋಪುರ ಹಾಳು ಮಾಡಬಾರದು. ಪರಿಸರ ನಾಶ ಮಾಡಬಾರದು. ನನಗೆ ಉತ್ತರ ಕೊಡುವ ಬದಲು ಜನರಿಗೆ ಸರ್ಕಾರ ಉತ್ತರ ನೀಡಬೇಕು. ನಾನಿಲ್ಲಿ ಜನರ ಧ್ವನಿಯಾಗಿ ಮಾತಾಡುತ್ತಿದ್ದೇನೆ ಎಂದರು.
ನವೆಂಬರ್ ಕ್ರಾಂತಿಯ ಬಗ್ಗೆ ಮಾಜಿ ಸಚಿವ ರಾಜಣ್ಣ ಹೇಳಿದ್ದರು. ರಾಮನಗರ, ದಾವಣಗೆರೆ ಶಾಸಕರು ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಅವರ ಶಾಸಕರೇ ಹೇಳಿದ್ದಾರೆ. ಬಿಜೆಪಿಯವರು ಅಭಿವೃದ್ಧಿಗಾಗಿ ಆಗ್ರಹಿಸುತ್ತಿದ್ದಾರೆ. ಯಾರೇ ಸಿಎಂ ಆದರೂ ಜನತೆಗೆ ಒಳಿತು ಮಾಡಬೇಕೆಂದು ಒತ್ತಾಯಿಸುತ್ತೇವೆ. ಕ್ರಾಂತಿ ಹಾಗೂ ಭ್ರಾಂತಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರೇ ಇಂತಹ ಮಾತಾಡುತ್ತಿದ್ದಾರೆ ಎಂದರು.




