ಬಳ್ಳಾರಿ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥಯಾತ್ರೆ ಬಳ್ಳಾರಿಗೆ ಆಗಮಿಸಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಮುದಾಯದ ಮುಖಂಡರು, ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವಾದಿ ಶರಣರ ರಥಯಾತ್ರೆಗೆ ಪೂಜೆ ಸಲ್ಲಿಸಿ ಪುಷ್ಪನಮನಗೈದು, ಗೌರವ ಸಮರ್ಪಿಸಲಾಯಿತು.
ಇದೇ ಏ.29 ಮತ್ತು 30ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ “ಅನುಭವ ಮಂಟಪ – ಬಸವಾದಿ ಶರಣ ವೈಭವ” ಕಾರ್ಯಕ್ರಮದ ಅಂಗವಾಗಿ ರಥಯಾತ್ರೆ ಆಯೋಜಿಸಲಾಗಿದ್ದು, ಮಂಗಳವಾರ ಬಳ್ಳಾರಿ ನಗರಕ್ಕೆ ಆಗಮಿಸಿದ ರಥಯಾತ್ರೆಯು ಸಿರುಗುಪ್ಪ ಮೂಲಕ ರಾಯಚೂರು ಜಿಲ್ಲೆಗೆ ರಥಯಾತ್ರೆಯು ತೆರಳಿತು.
ಜಗತ್ತಿನ ಪ್ರಪ್ರಥಮ ಸಂಸತ್ತು ಅನುಭವ ಮಂಟಪ – ಬಸವಾದಿ ಶರಣರ ವೈಭವ ರಥದಲ್ಲಿ ಬಸವಣ್ಣ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಭಗವಾನ್ ಗೌತಮ ಬುದ್ಧ, ಶಿವಶರಣೆ ಅಕ್ಕಮಹಾದೇವಿ, ಸಂತ ಶಿಶುನಾಳ ಶರೀಪ, ಗುರುನಾನಕ್, ಭಗವಾನ್ ಮಹಾವೀರ, ನಾರಾಯಣ ಗುರು, ಯೇಸು ಕ್ರಿಸ್ತರ ಪ್ರತಿಮೆಗಳನ್ನು ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ರಾಷ್ಟ್ರೀಯ ಬಸವ ದಳ ಕಾರ್ಯದರ್ಶಿ ರವಿಶಂಕರ್, ಮುಖಂಡರಾದ ಪನ್ನರಾಜ್ ಸಿರಿಗೇರಿ, ಟಿ.ಹೆಚ್.ಎಂ.ಬಸವರಾಜ್ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.




