ಬೆಂಗಳೂರು: ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಪದಾಧಿಕಾರಿಗಳಿಂದ ನಗರಸಭೆ ಅಧ್ಯಕ್ಷ ಕೆ ಶೇಷಾದ್ರಿ ಅವರಿಗೆ ಸಂಘದ ಸಲಹೆಗಾರ ಹೆಚ್ ಬಿ ಸಿದ್ಯಾನಾಯ್ಕ, ಕಾರ್ಯಾಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷ ಡಾ. ಎಂ ಆರ್ ಗೋವಿಂದ ಸ್ವಾಮಿ, ಧನಂಜಯ್ ನಾಯ್ಕ್ ಉಪಾಧ್ಯಕ್ಷ, ಕೃಷ್ಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ, ಶಂಕರ್ ನಾಯ್ಕ್, ಪ್ರಕಾಶ್ ನಾಯ್ಕ್ ಇವರುಗಳು ರಾಮನಗರ ನಗರ ಜಿಲ್ಲೆ ಬೇಡ ಬಂಜಾರರಿಗೆ ವಿವಿಧ ಸವಲತ್ತುಗಳನ್ನು ಕೋರಿ ಮನವಿ ಸಲ್ಲಿಸಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬೇಡಿಕೆಗಳು
೧. ರಾಮನಗರದ ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಪ್ರಧಾನಿಗಳು, ಕೆಂಗಲ್ ಹನುಮಂತಯ್ಯ, ಮುಖ್ಯಮಂತ್ರಿಗಳನ್ನು ಒಳಗೊಂಡಂತೆ ಥೀಮ್ ಪಾರ್ಕ್ ಮಾಡುವುದು.
೨. ನಗರದಲ್ಲಿ ಬಂಜಾರ ಭವನಕ್ಕೆ ನಿವೇಶನ ಮತ್ತು ಸಾಂಸ್ಕೃತಿಕ ಮತ್ತು ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ನಿವೇಶನ ನೀಡುವುದು.
೩. ಪ್ರತಿ ವರ್ಷ ನಗರದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಣೆಗೆ ಧನ ಸಹಾಯ ಮತ್ತು ಅನುದಾನ ನಿಗದಿ ಮಾಡುವುದು.
೪. ಸಂಘದ ಕಛೇರಿಗೆ ನಿವೇಶನ ಮತ್ತು ತಾತ್ಕಾಲಿಕ ಬಾಡಿಗೆ ಕಟ್ಟಡ ಒದಗಿಸುವುದು
೫. ಬಡ ಬಂಜಾರರಿಗೆ ಉಚಿತ ನಿವೇಶನ ನೀಡುವುದು.
೬. ನಗರದ ಸುತ್ತಮುತ್ತ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದು.
೭. ಖಾಸಗಿ ಸಹಭಾಗಿತ್ವದಲ್ಲಿ ನಗರವನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳುವುದು.





