ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷದ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮತೀಯ ಅಲ್ಪಸಂಖ್ಯಾತರ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್, ಆಂಗ್ಲೋಇಂಡಿಯನ್ ಗೆ ಸೇರಿದವರು ಅರ್ಜಿ ಸಲ್ಲಿಸಬಹುದು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನ. ತರಬೇತಿಯ ಅವಧಿ 4 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.5000 ತರಬೇತಿ ಭತ್ಯೆ ನೀಡಲಾಗುವುದು.
ಜಿಲ್ಲೆಯಿಂದ 05 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ, ಹೆಚ್ಚಿನ ಮಾಹಿತಿಗೆ ದೂರವಾಣಿ 08192-250022 ಸಂಪರ್ಕಿಸಬಹುದು.



