ಎಸ್.ಸಿ., ಎಸ್.ಟಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

2 years ago

ಧಾರವಾಡ: 2024-25ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷದೊಳಗೆ ಇರುವ ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿರುವ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರು www.twd.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಅಪಲೋಡ್ ಮಾಡಿಕೊಂಡು ಜೂನ್ 31, 2024 ರೊಳಗಾಗಿ ಸಲ್ಲಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ರೂ.ಗಳ ಶಿಷ್ಯವೇತನವನ್ನು ಸರಕಾರಿ, ಹಿರಿಯ ವಕೀಲರ ಮಾರ್ಗದರ್ಶನದಂತೆ 2 ವರ್ಷಗಳ ಕಾಲ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2447201 ಗೆ ಸಂಪರ್ಕಿಸಬಹುದು.

Leave a Reply