ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿ ಬಯಲು ಶೌಚಮುಕ್ತ ನಗರ ಪ್ರದೇಶವಾಗಿ ಘೋಷಿಲಾಗಿದೆ. ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ 2 ರಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಇದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಂತಿಕೆಯಾಗಿ ರೂ. 6,667/- ಗಳ ಸಹಾಯಧನವನ್ನು ನೀಡಲಾಗುವುದು. ಶೌಚಾಲಯ ರಹಿತ ಕುಟುಂಬಗಳು ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು www.swachhbharathurban.gov.in/ihhl ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಸಲ್ಲಿಸಬಹುದು.




