ದಾವಣಗೆರೆ: ಅಂಚೆ ಇಲಾಖೆಯಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲು ‘ದೀನ್ ದಯಾಳ ಸ್ಪರ್ಶ ಯೋಜನೆ’ಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಂಚೆ ಇಲಾಖೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಭಿರುಚಿಯ ಆರೋಗ್ಯ ಪೂರ್ಣ ಜ್ಞಾನಾಧಾರಿತ ಹವ್ಯಾಸ ಬೆಳೆಸುವುದು ಇದರ ಉದ್ದೇಶವಾಗಿದೆ. 2023-24ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ ಪಡೆದಿರಬೇಕು ಮತ್ತು ಅಂಚೆ ಚೀಟಿಗಳ ಠೇವಣಿ ಖಾತೆಯನ್ನು ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್ ಸದಸ್ಯರಾಗಿರಬೇಕು.
ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ.3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ www.indiapost.gov.in ಅಥವಾ www.karnatakapost.gov.in 8861126883 2019146755, 08192-236277 ಸಂಖ್ಯೆಗಳಿಗೆ ಸಂಪರ್ಕಿಸಬಹುದು.




